ಮೈಸೂರು: ಹುಣಸೂರಿನ ಕಳ್ಳಿ ಕೊಪ್ಪಲು ಗ್ರಾಮದಲ್ಲಿ ನಾಯಿಗಳಿಗೆ ಹೆದರಿ ಚಿರತೆಯೊಂದು ಮರವೇರಿ ಕುಳಿತ ಘಟನೆ ನಡೆದಿದೆ.
ಕಳ್ಳಿಕೊಪ್ಪಲು ಗ್ರಾಮಕ್ಕೆ ಬಂದ ಚಿರತೆಯನ್ನು ನಾಯಿಗಳು ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ನಾಯಿಗಳಿಗೆ ಹೆದರಿದ ಚಿರತೆ ಮರವೇರಿ ಕುಳಿತು ರಕ್ಷಣೆ ಪಡೆದಿದೆ. ಈ ಬಗ್ಗೆ ಸ್ಥಳಿಯರು ಅರಣ್ಯ ಅಧಿಕಾರಿಗಳಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆಯನ್ನು ಬಲೆ ಬೀಸಿ ಬಂಧಿಸಿದ್ದಾರೆ. ಚಿರತೆಯನ್ನು ನೋಡಲು ಜನರು ಮುಗಿಬಿದ್ದಿದ್ದರು.