ಮೈಸೂರು: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಮೈಸೂರಿಲ್ಲಿ ತಮಿಳು ಮೂಲದ ಐಟಿ, ಬಿಟಿ ಉದ್ಯೋಗಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಜಲ್ಲಿಕಟ್ಟುಕ್ರೀಡೆಗೆ ಅವಕಾಶ ನೀಡುವ ಮೂಲಕ ಅದರ ಆಚರಣೆಗೆ ಸುಗ್ರೀವಾಜ್ಞೆ ಹೊರಡಿಸಬೇಕೆಂದು ಒತ್ತಾಯಿಸಿದರು. ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಲ್ಲಿಕಟ್ಟು ಕ್ರೀಡೆಯ ಮೇಲಿನ ಸುಪ್ರೀಂ ನಿಷೇಧವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ತಮಿಳುನಾಡು ಮೂಲದ ನೂರಾರು ಉದ್ಯೋಗಿಗಳು ಪಾಲ್ಗೊಂಡಿದ್ದರು.