ಮೈಸೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ಈಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೊಬೈಲ್ ಸಿಗ್ನಲ್ ಆಧಾರದ ಮೇಲೆ ಶಂಕಿತರನ್ನು ಬಂಧಿಸಲಾಗಿದೆ. ಆರೋಪಿಗಳ ಜಾಡು ಹಿಡಿದು ಪೊಲೀಸರ ತಂಡಗಳು ತಮಿಳುನಾಡು ಮತ್ತು ಕೇರಳಕ್ಕೆ ಶುಕ್ರವಾರ ತೆರಳಿತ್ತು. ಶುಕ್ರವಾರ ತಡರಾತ್ರಿಯ ಹೊತ್ತಿಗೆ ನಾಲ್ವರನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಇವರು ಘಟನೆ ನಡೆದ ಸಂದರ್ಭದಲ್ಲಿ ಸ್ಥಳಕ್ಕೆ ಹೋಗಿದ್ದು ಏಕೆ, ನಂತರ ರಾಜ್ಯ ಬಿಟ್ಟು ಹೋಗಿದ್ದು ಏಕೆ ಎಂಬ ಕುರಿತು ಪೊಲೀಸರು ವಿಚಾರಣೆ ತೀವ್ರ ಗೊಳಿಸಿದ್ದಾರೆ.