ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಗ್ಯಾಂಗ್ರೇಪ್ನ ಆರೋಪಿಗಳ ಪರೇಡ್ ನಡೆಯಿತು. ಜೈಲಿನಲ್ಲಿರುವ ಆರೋಪಿಗಳನ್ನು ಒಬ್ಬರೊಬ್ಬರನ್ನಾಗಿ ಗುರುತಿಸಿ, ಆರೋಪಿಗಳು ಎಸಗಿದ ದುಷ್ಕೃತ್ಯ ಕುರಿತು ಸಂತ್ರಸ್ತೆ ಪೊಲೀಸರಿಗೆ ವಿವರಿಸಿದ್ದಾರೆ. ಮೈಸೂರಿನ ಪೊಲೀಸರು 10 ದಿನಗಳ ಹಿಂದೆಯೇ ಮುಂಬೈಗೆ ತೆರಳಿ ಸಂತ್ರಸ್ತೆಯ ಮನೆಯಲ್ಲೇ ಸೆಕ್ಷನ್ 161 ಅಡಿ ಹೇಳಿಕೆ ಪಡೆದಿದ್ದರು. ಪೊಲೀಸರ ಪ್ರಶ್ನೆಗಳಿಗೆ ಧನಾತ್ಮಕವಾಗಿ ಉತ್ತರಿಸಿದ್ದ ಸಂತ್ರಸ್ತೆ, ಬಂಧಿತ ಎಲ್ಲ ಆರೋಪಿಗಳನ್ನು ಫೋಟೋಗಳ ಮೂಲಕವೇ ಪತ್ತೆ ಹಚ್ಚಿದ್ದರು. ಅಲ್ಲದೆ, ಪ್ರತಿ ಆರೋಪಿಯೂ ಮಾಡಿದ ಆಪರಾಧ ಕೃತ್ಯಗಳ ಬಗ್ಗೆ ಪೊಲೀಸರ ಮುಂದೆ ವಿವರಿಸಿದ್ದರು.
ಇದಾದ ಮೇಲೆ ಮೈಸೂರಿಗೆ ಆಗಮಿಸಿರುವ ಸಂತ್ರಸ್ತೆ, ಬುಧವಾರ ಮ್ಯಾಜಿಸ್ಪ್ರೇಟ್ ಎದುರು ತನ್ನ ಹೇಳಿಕೆ ದಾಖಲಿಸಿದ್ದರು. ಈಗ ಆರೋಪಿಗಳ ಗುರುತು ಪತ್ತೆ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಪ್ರಕರಣದ ತನಿಖೆ ಹಾಗೂ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಗೆ ಸಹಕಾರ ನೀಡಿದ್ದಾರೆ.
ಮೈಸೂರಿನಲ್ಲಿ ನಡೆದ ಈ ಹೀನ ಕೃತ್ಯಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಕಾಮುಕರಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ರಾಜ್ಯದ ಜನರು ಪ್ರತಿಭಟನೆಗಳ ಮೂಲಕ ಆಗ್ರಹಿಸಿದ್ದರು.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…