ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದ ಮೊದಲ ಕಾರ್ಯಕ್ರಮ ಗಜಪಯಣ ಇಂದಿನಿಂದ ಆರಂಭವಾಗಲಿದೆ.
ದಸರಾ ಗಜಪಡೆಗೆ ವೀರನ ಹೊಸಹಳ್ಳಿಯಲ್ಲಿ ಬೆಳಗ್ಗೆ 9:40ರ ಶುಭ ಮಹೂರ್ತದಲ್ಲಿ ಪೂಜೆ ನೆರವೇರಿಸಲಾಗುವುದು. ಗಜಪಯಣ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ ನೀಡಲಿದ್ದಾರೆ.
ಈಗಾಗಲೇ ದಸರಾಗೆ ಆಯ್ಕೆಯಾಗಿರುವ ಆನೆಗಳ ಸ್ವಾಗತಕ್ಕೆ ಅರಣ್ಯಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮೊದಲ ಪೂಜೆ ಜಿಲ್ಲಾಡಳಿತ ನಡೆಸಲಿದ್ದು, ನಂತರ ಕಾರ್ಯಕ್ರಮ ಆರಂಭವಾಗಲಿದೆ. ವಿವಿಧ ಶಿಬಿರಗಳಿಂದ ವೀರನಹೊಸಹಳ್ಳಿಗೆ ಆನೆಗಳು ಆಗಮಿಸಲಿವೆ. ಮಾವುತ, ಕಾವಾಡಿಗಳ ಕುಟುಂಬದೊಂದಿಗೆ ಆನೆಗಳು ಮೈಸೂರಿನತ್ತ ಪ್ರಯಾಣ ಬೆಳೆಸಿವೆ.