ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಟೂರಿಸ್ಟ್ ಸರ್ಕ್ಯೂಟ್ ರೂಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಾಮುಂಡಿ ಬೆಟ್ಟದಲ್ಲಿ ಇಂದು ನಡೆದ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಶ್ವದಲ್ಲಿ ಬೇರೆ, ಬೇರೆ ಹಬ್ಬಗಳನ್ನು ಆಚರಿಸುತ್ತಾರೆ. ಅದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಟೂರಿಸಂ ಸರ್ಕ್ಯುಟ್ ಮಾಡಿ ಪ್ರಚಾರ ಮಾಡುತ್ತಾರೆ.
ಪ್ರಾನ್ಸ್, ರೋಮ್ ದೇಶಗಳಲ್ಲಿ ಈ ರೀತಿಯ ಪ್ರಚಾರ ನೀಡಲಾಗುತ್ತದೆ. ಇದೇ ಮಾದರಿಯಲ್ಲಿ ಮೈಸೂರು ದಸರಾಗೂ ಅಂತರಾಷ್ಟ್ರೀಯ ಟೂರಿಸ್ಟ್ ಸರ್ಕ್ಯೂಟ್ ರೂಪಿಸಿ, ಪ್ರಚಾರ ನೀಡಲು ಸಂಬಂಧಿಸಿದ ವ್ಯಕ್ತಿ ಗಳೊಂದಿಗೆ ಮಾತುಕತೆ ನಡೆಸಲಾಗುತ್ತದೆ ಎಂದು ತಿಳಿಸಿದರು.