ಮೈಸೂರು: ನಗರ ಕಾಂಗ್ರೆಸ್ ಅಧ್ಯಕ್ಷ ಉದ್ಯಮಿಯೊಬ್ಬರ ಕಚೇರಿಗೆ ನುಗ್ಗಿ ಹಲ್ಲೆ ನಡೆಸಿರುವ ಘಟನೆ ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯಾರಣ್ಯಪುರಂನ ನಾಗಪ್ರಸಾದ್ ಎಂಬುವವರೇ ಹಲ್ಲೆಗೊಳಗಾದವರು. ನಗರ ಕಾಂಗ್ರೆಸ್ ಅಧ್ಯಕ್ಷ ರವಿಶಂಕರ್ ಹಾಗೂ ಅವರ ಬೆಂಬಲಿಗ ವೆಂಕಟೇಶ ಎಂಬುವರು ನಾಗಪ್ರಸಾದ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ನಿವೇಶನವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ನಾಗ ಪ್ರಸಾದ್ ಅವರ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ನಿವೇಶನ ಬರೆಸಿಕೊಂಡ ಆರೋಪ ಮಾಡಿರುವ ನಾಗಪ್ರಸಾದ್ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.