ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವನ್ನು ಬಿ.ಎಸ್.ಯಡಿಯೂರಪ್ಪ ಅವರು ನೀಡಿದ ನಂತರ ಮೊದಲ ಬಾರಿಗೆ ಶಾಸಕ ಎಸ್.ಎ.ರಾಮದಾಸ್ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತಲೆಯಲ್ಲಿ ರಾಜಕೀಯ ಇಲ್ಲ. ನಾನು ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಮೇಲೆ ಗಮನಹರಿಸುತ್ತಿದ್ದೇನೆ. ನಾನು ಬೆಂಗಳೂರಿಗೂ ಹೋಗಿಲ್ಲ, ದೆಹಲಿಗೂ ಹೋಗಿಲ್ಲ ಎಂದು ತಿಳಿಸಿದ್ದಾರೆ.
ರಾಜಕಾರಣ ಹರಿಯುವ ನೀರು. ಯಾರು ಹೋಗುತ್ತಾರೆ, ಯಾರು ಬರುತ್ತಾರೆ ಎನ್ನುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಯಡಿಯೂರಪ್ಪ ಅವರು ನನ್ನ ತಂದೆ ಸಮಾನರು. ನಿರಂತರವಾಗಿ ನನ್ನನ್ನು ಯುವಮೋರ್ಚಾ ಅಧ್ಯಕ್ಷನನ್ನಾಗಿಸಿ ಬೆಳೆಸಿದವರು. ಅವರು ರೈಲ್ವೆ ಇಂಜಿನ್, ನಾವು ಬೋಗಿಗಳ ರೀತಿ ಅವರನ್ನು ಅನುಸರಿಸುತ್ತಿದ್ದೇನೆ. ಯಡಿಯೂರಪ್ಪ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾದರೆ, ನಾನು ಬಿಎಸ್ವೈ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.
ಮಠಾಧೀಶರ ಬೆಂಬಲ ಕುರಿತು ಪ್ರತಿಕ್ರಿಯಿಸಿ, ರಾಜಕಾರಣ ನಡೆಯುತ್ತಾ ಹೋಗುತ್ತೆ. ನಾನಾಗಲಿ, ಮಠಾಧೀಶರಾಗಲಿ ಬೆಂಬಲ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಯಡಿಯೂರಪ್ಪ ಅವ್ರು ರೈಲು ಇಂಜಿನ್, ನಾನು ಬೋಗಿ: ಶಾಸಕ ರಾಮದಾಸ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.