ಮೈಸೂರು: ಮಹಾರಾಷ್ಟ್ರ ವಿರುದ್ಧ ನಡೆಯುತ್ತಿದ್ದ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ 7 ವಿಕೆಟ್ ಗಳ ಗೆಲುವು ಪಡೆದುಕೊಂಡಿದೆ.
ನಗರದ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಮಹಾರಾಷ್ಟ್ರ ವಿರುದ್ಧದ ರಣಜಿ ಪಂದ್ಯದಲ್ಲಿ ಗೆಲ್ಲಲು 184 ರನ್ ಗಳ ಗುರಿ ಪಡೆದಿದ್ದ ಕರ್ನಾಟಕ ಇಂದು 3 ವಿಕೆಟ್ ಗಳನ್ನು ಕಳೆದುಕೊಂಡು 70.2 ಓವರ್ ಗಳಲ್ಲಿ ಗೆಲುವು ಸಾಧಿಸಿತು.
ಕರ್ನಾಟಕದ ಪರವಾಗಿ ದೇವದತ್ತ ಪಡಿಕಲ್(77) ಡಿ.ನಿಶ್ಚಲ್(61) ಕೌನೆನ್ ಅಬ್ಬಾಸ್ (34) ಉತ್ತಮವಾಗಿ ಬ್ಯಾಟಿಂಗ್ ಮಾಡಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.