ಮೈಸೂರು: ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಿರುವುದು ಸರಿಯಾದ ಕ್ರಮವಾಗಿತ್ತು. ಆದರೆ 15 ದಿನಗಳ ಕಾಲಾವಕಾಶ ನೀಡಿರುವುದು ತಪ್ಪು ಎಂದು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.
ಇಂದಿನ ರಾಜಕೀಯ ಪರಿಸ್ಥಿತಿಗೆ ರಾಜ್ಯದ ಮತದಾರರೇ ಕಾರಣ. ಜಾತಿ ಹಾಗೂ ಹಣಕ್ಕಾಗಿ ಮತ ಹಾಕಿರುವ ಪರಿಣಾಮ ಈ ಪರಿಸ್ಥಿತಿ ಬಂದಿದೆ ಎಂದು ಅವರು ಹೇಳಿದರು.
ರಾಜ್ಯಪಾಲರ ನಡೆ ಬಗ್ಗೆ ಟೀಕಿಸುವುದು ಸುಲಭ. ಆದರೆ ಅವರು ಕಾನೂನಾತ್ಮಕವಾಗಿ ನಡೆದುಕೊಂಡಿದ್ದಾರೆ. ಆದರೆ 15 ದಿನಗಳ ಕಾಲಾವಕಾಶ ನೀಡಿರುವುದು ತಪ್ಪು. ಇದನ್ನು ಸುಪ್ರೀಂ ಸರಿಪಡಿಸಿದೆ ಎಂದು ಸಂತೋಷ್ ಹೆಗ್ಡೆ ತಿಳಿಸಿದರು.