ಮೈಸೂರು: ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಇನ್ನೂ ನಡೆದಿಲ್ಲ ಶಾಸಕರ ಸಭೆಯ ಬಳಿಕ ತೀರ್ಮಾನಿಸಲಾಗುವುದು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೆಗೌಡ ಹೇಳಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಸಂದರ್ಭ ಮಾತನಾಡಿದ ಅವರು, ರಾಜ್ಯ ಸಭೆಗೆ ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ತೀರ್ಮಾನವಾಗಿಲ್ಲ ಈ ವಿಚಾರ ಚರ್ಚೆ ಮಾಡಲು ಇಂದು ಸಂಜೆ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರ ಸ್ವಾಮಿ ಶಾಸಕರ ಸಭೆ ಕರೆದಿದ್ದು ನಂತರ ತೀರ್ಮಾನಿಸಲಾಗುವುದು ಎಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿಯಿಲ್ಲ ಎಂಬುವುದನ್ನು ಸಮಯ ಬಂದಾಗ ಮಾತನಾಡುತ್ತೇನೆ. ರಾಜ್ಯದಲ್ಲಿ ವಿರೋಧ ಪಕ್ಷ ಸತ್ತು ಹೋಗಿದೆ. ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ ದೇವೆಗೌಡರು ಮೋದಿ ಸರ್ಕಾರದ ಎರಡು ವರ್ಷದ ಸಾಧನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.