ಮೈಸೂರು: ಮನೆ ತೊರೆದು ರೈಲ್ವೆ ನಿಲ್ದಾಣಕ್ಕೆ ಬಂದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ರೈಲ್ವೆ ಟೆಕೆಟ್ ವಿತರಕನ ವಿರುದ್ದ ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ.
ಪ್ರಕರಣ ದಾಖಲಾಗಿರುವ ವ್ಯಕ್ತಿ ಕಿರಣ್. ಈತ ಮೈಸೂರು ನಗರದ ರೈಲ್ವೆ ನಿಲ್ದಾಣದಲ್ಲಿ ಟಿಕೆಟ್ ವಿತರಕನಾಗಿ ಕೆಲಸ ನಿರ್ವಹಿಸುತ್ತಿದ್ದು ಮನೆಯವರೊಂದಿಗೆ ಗಲಾಟೆ ಮಾಡಿಕೊಂಡು ಮನೆ ತೊರೆದು ರೈಲ್ವೆ ನಿಲ್ದಾಣಕ್ಕೆ ಬಂದು ಸುತ್ತಾಡುತ್ತಿದ್ದಾಗ ಪರಿಚಿತನಾದ ಕಿರಣ್, ನಿನ್ನನ್ನು ಮದುವೆಯಾಗುವುದಾಗಿ ಹೇಳಿ ರೈಲ್ವೆ ನಿಲ್ದಾಣದ ಬಳಿಯ ವಸತಿಗೃಹವೊಂದರಲ್ಲಿ ಸತತ ಅತ್ಯಾಚಾರ ನಡೆಸಿದ್ದು, ಕೊನೆಗೆ ನೀನಿನ್ನು ಚಿಕ್ಕವಳು ಎಂದು ಮದುವೆಯಾಗಲು ತಿರಸ್ಕರಿಸುದಾಗಿ 13 ವರ್ಷದ ಬಾಲಕಿ ಪೊಲೀಸರಿಗೆ ತಿಳಿಸಿದ್ದು ಪೊಲೀಸರು ಅಪ್ರಾಪ್ತ ಬಾಲಕಿಯನ್ನು ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ.
ಬಾಲಮಂದಿರದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಆಪ್ತ ಸಮಾಲೋಚನೆ ನಡೆಸಿದಾಗ ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ರೈಲ್ವೆ ನಿಲ್ದಾಣದ ಟೆಕೆಟ್ ವಿತರಕ ಕಿರಣ್ ಅತ್ಯಾಚಾರ ನಡೆಸಿರುವುದು ಗೊತ್ತಾಗಿದ್ದು, ಈ ಹಿನ್ನಲ್ಲೆಯಲ್ಲಿ ಬಾಲ ಮಂದಿರದ ಅಧೀಕ್ಷಕಿ ಕವಿತಾ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.