ಮೈಸೂರು, : “ರೋಹಿಣಿ ಸಿಂಧೂರಿ ಅವರು ಸಿಂಗಂ ಅಲ್ಲ, ಮೈಸೂರು ಜನರನ್ನು ಮಂಗಂ ಮಾಡಲು ಹೊರಟಿದ್ದ ಪ್ರಚಾರ ಪ್ರಿಯೆ,” ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಕಿಡಿಕಾರಿದರು.
ಮೈಸೂರು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಸ್ತಿ ವ್ಯಾಜ್ಯ ಸಂಬಂಧ ಸುಪ್ರೀಂ ಕೋರ್ಟ್ವರೆಗೂ ಹೋದವರು ಮೂರನೇ ದಿನದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಪ್ರಮೋದಾ ದೇವಿ ಜೊತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಾರೆ. ಜಗತ್ತಿನ ಎಲ್ಲಿಯಾದರೂ ಹೀಗೆ ನಡೆಯುತ್ತಾ,” ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಫೋಟೋ ತೋರಿಸಿ ವಾಗ್ದಾಳಿ ನಡೆಸಿದರು.
“ಸರ್ವೇ ನಂ. 4 ವ್ಯಾಜ್ಯದಲ್ಲಿ ಡಿಸಿ ವಾದಿ ಮತ್ತು ರಾಜವಂಶಸ್ಥರು ಪ್ರತಿವಾದಿ. ಆ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಅಡ್ಮಿಟ್ ಆಗಲಿಲ್ಲ. ಕೇಸ್ ವಜಾಗೊಂಡ ಮೂರನೇ ದಿನದಲ್ಲಿ ವಾದಿ, ಪ್ರತಿವಾದಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈಗ ಫೋಟೋ ತೆಗೆಸಿಕೊಳ್ಳುವ ನಿಮಗೆ ರಾಜವಂಶದವರ ಇತಿಹಾಸ ಗೊತ್ತಿರಲಿಲ್ಲವೇ,” ಎಂದು ರೋಹಿಣಿ ಅವರನ್ನು ಪ್ರಶ್ನಿಸಿದರು.
“ಒಂದು ಕೋಟಿ ರೂ. ದುರ್ಬಳಕೆ ಮಾಡಿಕೊಂಡಿರುವ ಕಾರಣಕ್ಕಾಗಿ ನಿಮ್ಮ ಮೇಲೆ ಕ್ರಮ ಆಗಬೇಕು. ರಾಜಮನೆತನ ಮತ್ತು ಅವರ ಕೊಡುಗೆ ಬಗ್ಗೆ ಈ ರೋಹಿಣಿ ಅವರು ಪುಸ್ತಕ ಓದಿಕೊಂಡಿರಬೇಕು. ರಾಜಮನೆತನ ಏನು, ಮೈಸೂರು ಜನ ಏನು ಎಂದು ಅವರಿಗೆ ಈಗ ಗೊತ್ತಾದಂತಿದೆ.””ರಾಜ ಮನೆತನದವರ ಮೇಲೆ ಅಡ್ಮಿಟ್ ಆಗದ ಕೇಸ್ನ್ನು ಹಾಕಿದ್ದಾರೆ. ಇದಕ್ಕೆ 24 ಲಕ್ಷ ರೂ. ಹಣವನ್ನು ವ್ಯರ್ಥ ಮಾಡಿದರು. ಇದು ಮುಡಾ ಸಿಬ್ಬಂದಿ ನಿವೃತ್ತರಾದ ನಂತರ ಅವರಿಗೆ ಕೊಡುವ ಪಿಂಚಣಿ ಹಣವನ್ನು ಯಾರ ಅನುಮತಿ ಪಡೆಯದೆಯೇ ವ್ಯರ್ಥ ಮಾಡಿದ್ದಾರೆ,” ಎಂದು ಹರಿಹಾಯ್ದರು.
“ಭೂ ಹಗರಣದಿಂದ ನನ್ನ ವರ್ಗಾವಣೆ ಮಾಡಿದರು ಎಂಬ ರೋಹಿಣಿ ಸಿಂಧೂರಿ ಆರೋಪ ಸುಳ್ಳು. ಅವರು ಯಾವುದೇ ಭೂಮಿ ಉಳಿಸುವ ಕೆಲಸ ಮಾಡಿಲ್ಲ. ದಲಿತ ಸಮುದಾಯದ ಶರತ್ರನ್ನು 28 ದಿನಗಳಲ್ಲಿ ವರ್ಗಾವಣೆ ಮಾಡಿಸಿದರು. ವಾಲ್ಮೀಕಿ ಜಯಂತಿಯಂದು ನಾಗರಹೊಳೆಯ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದರು. ದಸರಾ ಸಂದರ್ಭದಲ್ಲೂ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದರು. ಕೋವಿಡ್ ಸಾವಿನ ಸಂಬಂಧ ತಪ್ಪು ಲೆಕ್ಕ ನೀಡಿದ್ದರು. ಸಾ.ರಾ. ಚೌಲ್ಟ್ರಿ ರಾಜಕಾಲುವೆ, ಗೋಮಾಳದಲ್ಲಿ ನಿರ್ಮಾಣ ಮಾಡಿದೆ ಅಂತ ಆರೋಪ ಮಾಡಿದ್ದರು. ಉಲ್ಲಂಘನೆ ಆಗಿಲ್ಲ ಎಂದು ಜಿಲ್ಲಾಧಿಕಾರಿಗಳಿಂದಲೇ ವರದಿ ಬಂದಿದೆ,” ಎಂದು ಸಾ.ರಾ. ಮಹೇಶ್ ಸ್ಪಷ್ಟಪಡಿಸಿದರು.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…