ಮೈಸೂರು: ಶುಕ್ರವಾರ ಬೆಳಿಗ್ಗೆಯಷ್ಟೇ ವಾಯುವಿಹಾರಕ್ಕೆಂದು ತೆರಳಿದ್ದ ನಗರ ಸಶಸ್ತ್ರ ಮೀಸಲು ಪಡೆಯ ಎಎಸ್ಐ ಮಹಾದೇವಸ್ವಾಮಿ ಅವರ ಪುತ್ರ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಪೊಲೀಸ್ ಬಡಾವಣೆ ಮೂರನೇ ಹಂತದ ನಿವಾಸಿ ಮಹಾದೇವಸ್ವಾಮಿ ಅವರ ಮಗ ಮನೋಜ್ (17) ಮೃತಪಟ್ಟಿದ್ದಾನೆ.
ಪೋಲೀಸ್ ಬಡಾವಣೆಯ ಹಿಂಬದಿ ಇರುವ ನಾಲೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಮನೋಜ್ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಯು ವಿಹಾರಕ್ಕೆ ತರಳಿದ್ದ ಬಾಲಕನ ಶವ ನಾಲೆಯಲ್ಲಿ ಪತ್ತೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.