ಮೈಸೂರು: ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಜಕೀಯ ಪುಕ್ಕಲುತನವಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸೋಮವಾರ ನಗರದಲ್ಲಿ ಲೇವಡಿ ಮಾಡಿದರು.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕರೆದು ಮಾತನಾಡಿದಾಗ, ರಾಷ್ಟ್ರ ರಾಜಕಾರಣಕ್ಕೆ ಬರುವೆ. ನನ್ನನ್ನೇ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ಎಂದು ಹೇಳುವ ಧೈರ್ಯ ಪ್ರದಶಿ೯ಸಬೇಕಿತ್ತು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.
ಕನ್ನಡಿಗರೊಬ್ಬರು ಪ್ರಧಾನಿ ಅಭ್ಯರ್ಥಿಯಾಗುವುದು ಹೆಮ್ಮೆಯ ವಿಷಯವಲ್ಲವೇ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಲೋಕಾಯುಕ್ತ ಶಕ್ತಿಗೊಳಿಸಿ: ಸಿದ್ದರಾಮಯ್ಯ ನಿಷ್ಕ್ರಿಯಗೊಳಿಸಿದ ಲೋಕಾಯುಕ್ತ ಸಂಸ್ಥೆಯನ್ನು ಮತ್ತೆ ಸದೃಢಗೊಳಿಸಿ. ಹಿಂದಿದ್ದ ಅಧಿಕಾರ ನೀಡಿ ಎಂದು ವಿಶ್ವನಾಥ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.