ಮೈಸೂರು: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಿವಾಹಿತ ಪುರುಷನೊಬ್ಬ ಅಕೆಯ ಮೇಲೆ ನಿರಂತರ ಅತ್ಯಾಚಾರವೆಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಘಟನೆ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಟ್ಟಸ್ವಾಮಿ ಎಂಬವರ ಮಗನಾದ ವಿರೂಪಾಕ್ಷ(೩೫) ಎಂಬಾತನೇ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ ಕಾಮುಕನಾಗಿದ್ದಾನೆ. ಈತ ತನ್ನದೇ ಗ್ರಾಮದ ತನ್ನ ಮನೆಯ ಎದುರಿನ ೧೬ ವರ್ಷದ ಬಾಲಕಿಯೊರ್ವಳೊಂದಿಗೆ ಸಲುಗೆಯಿಂದ ಇದ್ದುಕೊಂಡು ಬಾಲಕಿ ಪೋಷಕರು ಮನೆಯಲ್ಲಿ ಇಲ್ಲದ ಸಂದರ್ಭ ಬಾಲಕಿಯನ್ನ ಮದುವೆಯಾಗುವುದಾಗಿ ಪುಸಲಾಯಿಸಿ ಆಕೆಯ ಜೊತೆ ಕಳೆದ ೧ ವರ್ಷದಿಂದ ದೈಹಿಕ ಸಂಪರ್ಕ ಬೆಳೆಸಿದ್ದು ಪರಿಣಾಮ ಬಾಲಕಿ ಗರ್ಬೀಣಿಯಾಗಿದ್ದಾಳೆ ಎನ್ನಲಾಗಿದೆ.
ಗರ್ಬಿಣಿಯಾದ ಬಾಲಕಿ ಅನಾರೋಗ್ಯಕ್ಕೆ ಒಳಗಾದ ಕಾರಣ ಅಕೆಯನ್ನು ಅಸ್ಪತ್ರೆಗೆ ಕರೆತಂದು ತಪಾಸಣೆ ಮಾಡಲಾಗಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಪೋಷಕರು ಬಾಲಕಿಯನ್ನ ವಿಚಾರಿಸಲಾಗಿ ಬಾಲಕಿ ವಿರೂಪಾಕ್ಷ ನನ್ನನ್ನು ಮದುವೆಯಾಗುವುದಾಗಿ ಪುಸಲಾಯಿಸಿ ನನ್ನೊಡನೆ ದೈಹಿಕ ಸಂಪರ್ಕ ನಡೆಸಿದ್ದನೆಂದು ತಿಳಿಸಿದ್ದಾಳೆ.
ಈ ಸಂಬಂಧ ಬಾಲಕಿಯ ತಂದೆ ಸುರೇಶ್ ತಿ.ನರಸೀಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ವಿರೂಪಾಕ್ಷನ ಹುಡುಕಾಟ ನಡೆಸಿದ್ದಾರೆ. ವಿರೂಪಾಕ್ಷನಿಗೆ ಮದುವೆಯಾಗಿದ್ದು, ಪತ್ನಿ ಹಾಗೂ ೧ ವರ್ಷದ ಗಂಡು ಮಗು ಕೂಡ ಇದೆ.
ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುಡ್ನ್ಯೂಸ್ವೊಂದನ್ನು ನೀಡಿದೆ.
ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ ರೋಚಕವಾಗಿದೆ.
ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ…
ಕುರುಬ ಸಮಾಜಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕಾರಗೆ ಕುರುಬ ಸಮಾಜದ ರಾಜಕಾರಣದ…
ಔಷಧಿಗಳ ತಯಾರಿಕಾ Oxford-AstraZeneca ಸಂಸ್ಥೆ ಕೊರೊನಾ ಲಸಿಕೆ ಕೋವಿಶೀಲ್ಡ್ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಕೋರ್ಟ್ ಮುಂದೆ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ…