ಮೈಸೂರು: ಕಳೆದ ಮೂರು ದಿನಗಳಿಂದ ಹೆಚ್. ಡಿ. ಕೋಟೆಯ ಖಾಸಗಿ ರೆಸಾರ್ಟ್ ನಲ್ಲಿ ಕುಟುಂಬ ಸಮೇತ ವಿಶ್ರಾಂತಿ ಪಡೆಯುತ್ತಿದ್ದ ಸಿ.ಎಂ ಹೆಚ್.ಡಿ. ಕುಮಾರಸ್ವಾಮಿ ರಸ್ತೆಯ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.
ಕಳೆದ ಶುಕ್ರವಾರ ರಾತ್ರಿ ಮೈಸೂರು ಜಿಲ್ಲೆಯ ಹೆ.ಚ್.ಡಿ.ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿರುವ ಆರೆಂಜ್ ಕೌಂಟಿ ಖಾಸಗಿ ರೆಸಾರ್ಟ್ ನಲ್ಲಿ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಗೆ ಆಗಮಿಸಿದ ಹೆಚ್.ಡಿ. ಕುಮಾರಸ್ವಾಮಿ ಅವರು ಮೂರು ದಿನಗಳಿಂದ ಈ ರೆಸಾರ್ಟ್ ನ ಒಳಗಡೆ ವಿಶ್ರಾಂತಿ ಪಡೆದಿದ್ದರು. ಇವರ ಜೊತೆ ಆಗಮಿಸಿದ ಪತ್ನಿ ಅನಿತಾ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಸಹ ಜೊತೆಯಲ್ಲೇ ಇದ್ದರು.
ಇಂದು ಬೆಳಗ್ಗೆ ರೆಸಾರ್ಟ್ ನಲ್ಲಿ ತಿಂಡಿ ಮುಗಿಸಿದ ಕುಮಾರಸ್ವಾಮಿಯವರು ರಸ್ತೆ ಮೂಲಕ ಹೊರಟಿದ್ದಾರೆ.
ಅವರು ಬೆಂಗಳೂರು ತಲುಪಿದ ನಂತರ ಅಕಾಲಿಕವಾಗಿ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.