ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಡಿ.ದೇವೇಗೌಡರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ಗೌಡ ಅವರ ಪುತ್ರಿ 3 ವರ್ಷದ ಗೌರಿ ನಿಧನ ಹೊಂದಿದ್ದಾಳೆ.
ಅನಾರೋಗ್ಯ ನಿಮಿತ್ತ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲು ಮಾಡಲಾಗಿದ್ದ ಗೌರಿ ಚೇತರಿಸಿಕೊಂಡಿದ್ದಳು.
ಆದರೆ, ಇದ್ದಕ್ಕಿದ್ದಂತೆಯೇ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮಧ್ಯರಾತ್ರಿ 12.30ರ ವೇಳೆಗೆ ನಿಧನ ಹೊಂದಿದಳು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಭಾನುವಾರ ಪಾರ್ಥಿವ ಶರೀರವನ್ನು ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರದ ಜಿ.ಟಿ.ದೇವೇಗೌಡರ ಮನೆಗೆ ತರಲಾಗುತ್ತಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಗೌಡರ ತೋಟದಲ್ಲಿ ಅಂತ್ಯ ಕ್ರಿಯೆ ನೆರವೇರಲಿದೆ ಎಂದು ತಿಳಿಸಲಾಗಿದೆ.