News Karnataka Kannada
Thursday, May 09 2024
ಮೈಸೂರು

ಸಾಧ್ಯವಾದರೆ ರೋಹಿಣಿ ಸಿಂಧೂರಿಯನ್ನು ವರ್ಗಾವಣೆಗೊಳಿಸಿ; ಸಂಸದನಿಗೆ ಸವಾಲ್ ಹಾಕಿದ ಶಾಸಕ

Photo Credit :

ಸಾಧ್ಯವಾದರೆ ರೋಹಿಣಿ ಸಿಂಧೂರಿಯನ್ನು ವರ್ಗಾವಣೆಗೊಳಿಸಿ;  ಸಂಸದನಿಗೆ ಸವಾಲ್ ಹಾಕಿದ ಶಾಸಕ

ಮೈಸೂರು: ರೋಹಿಣಿ ಸಿಂಧೂರಿ ವಿರುದ್ಧ ನೀಡುತ್ತಿದ್ದ ಪ್ರತಿಕ್ರಿಯೆ ಹಾಗೂ ಅವರ ಮೇಲಿನ ಆರೋಪಗಳ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಮೇಲೆ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಶಾಸಕ, ಪ್ರತಾಪ್ ಸಿಂಹ ಅವರಿಗೆ ಸವಾಲೊಂದನ್ನು ಹಾಕಿದ್ದು, ನಿನಗೆ ತಾಕತ್ತಿದ್ದರೆ ಮೈಸೂರು ಡಿಸಿಯನ್ನು ವರ್ಗಾವಣೆ ಮಾಡಿಸು ಎಂದು ಹೇಳುತ್ತಾರೆ. 

 

ಅಷ್ಟೇ ಅಲ್ಲದೆ, ಸುಖಾಸುಮ್ಮನೆ ಹಾದಿಬೀದಿಲಿ ನಿಂತು ಮಾತನಾಡಬೇಡ. ದಿನ ಬೆಳಗಾದರೆ ರೋಹಿಣಿ ಸಿಂಧೂರಿ ವಿರುದ್ಧ ಪತ್ರಿಕೆಗೆ ಸ್ಟೇಟ್‌ಮೆಂಟ್ ಕೊಟ್ಟರೆ ನೀನು ಹುಲಿ ಆಗಲ್ಲ. ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡ. ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ. ನೀನು ಪವರ್‌ಫುಲ್​ ಸಂಸದ. ನೀನು ಹೇಳಿದಂತೆ ಪಿಎಂ ಮತ್ತು ಸಿಎಂ ಕೇಳ್ತಾರೆ. ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನ ವರ್ಗಾವಣೆ ಮಾಡಿ ತೋರಿಸು ಎಂದು ಪ್ರತಾಪ್​ ಸಿಂಹ ವಿರುದ್ಧ ಕಿಡಿಕಾರಿದರು. 

 

 ಇನ್ನು ಜಿಲ್ಲೆಯಲ್ಲಿ ಶಾಸಕರು ಸ್ವಯಂ ಹಣ ವಿನಿಯೋಗಿಸಿ ಕೋವಿಡ್ ನಿಯಂತ್ರಣಕ್ಕಾಗಿ ಕೆಲಸ ಮಾಡುತ್ತಿರುವುದರ ಕುರಿತು ಮಾತನಾಡುತ್ತಾ, ಸಂಸದ ಪ್ರತಾಪ್ ಸಿಂಹ ಅವರಲ್ಲಿ ನೀವು ಎಷ್ಟು ಸ್ವಯಂ ಹಣವನ್ನು ವಿನಿಯೋಗಿಸಿದ್ದೇನೆ ಎಂದು ಪ್ರಶ್ನಿಸಿದ್ದಾರೆ. 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು