Categories: ಮೈಸೂರು

ಸಿಬ್ಬಂದಿಗೆ ಲೈಗಿಂಕ ಕಿರುಕುಳ: ವೃದ್ಧ ಪ್ರಾಂಶುಪಾಲರ ವಿರುದ್ಧ ಎಫ್ಐಆರ್

ಮೈಸೂರು: ಮೂರು ತಿಂಗಳಲ್ಲಿ ನಿವೃತ್ತಿ ಪಡೆದು ಮೊಮ್ಮಕ್ಕಳ ಜತೆ ಕಾಲಕಳೆಬೇಕಿದ್ದ ವೃದ್ಧ ಪ್ರಾಂಶುಪಾಲರೊಬ್ಬ ತಮ್ಮ ಕಾಲೇಜಿನ ವಿಧವೆ ಪ್ರಥಮ ದರ್ಜೆ ಸಹಾಯಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ನಜರ್ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ನಗರದ ನಜರ್ಬಾದ್ ಮಹಾರಾಜ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಚಂದ್ರಶೇಖರ್(59) ಅವರ ವಿರುದ್ಧವೇ ಲೈಗಿಂಕ ಕಿರುಕುಳ ನೀಡದ ಆರೋಪದಡಿಯಲ್ಲಿ ದೂರು ದಾಖಲಾಗಿದ್ದು, ಈ ಸಂಬಂಧ ನಜರ್ಬಾದ್ ಠಾಣೆಯ ಪೊಲೀಸರು ನಾಪತ್ತೆಯಾಗಿರುವ ಪ್ರಾಂಶುಪಾಲರ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

ನಗರದ ವಿಭಜಿತ ಪದವಿ ಪೂರ್ವ ಮಹಾರಾಜ ಕಾಲೇಜಿಗೆ ಪ್ರಾಂಶುಪಾಲರಾಗಿ ಕಳೆದ ನಾಲ್ಕು ವರ್ಷದ ಹಿಂದೆಯಷ್ಟೇ ಪ್ರಾಂಶುಪಾಲ ಚಂದ್ರಶೇಖರ್ ವರ್ಗಾವಾಗಿದ್ದರು. ಅಲ್ಲದೆ ಅದೇ ಕಾಲೇಜಿನಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಂಡನ ಅಕಾಲಿಕ ಮರಣ ಹಿನ್ನಲೆಯಲ್ಲಿ ಗಂಡನ ಕೆಲಸವನ್ನು ಅನುಕಂಪದ ಆಧಾರದ ಮೇಲೆ ಹೆಂಡತಿ ಮಂಜುಳ ಎಂಬುವವರಿಗೆ ಕೆಲಸ ನೀಡಲಾಗಿತ್ತು. ಈ ನಡುವೆ ಪ್ರಾಂಶುಪಾಲರಾದ ಚಂದ್ರಶೇಖರ್ ನಿರಂತರ ಮಾನಸಿಕ ಹಾಗೂ ಲೈಗಿಂಕ ಕಿರುಕುಳ ನೀಡಿದ್ದು ಇದರಿಂದ ಬೇಸತ್ತ ಮಂಜುಳಾ ಈ ಕುರಿತು ಕಳೆದ ಡಿಸೆಂಬರ್ನಲ್ಲಿ  ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿದೇರ್ಶಕರಿಗೆ ಲಿಖಿತ ರೂಪದಲ್ಲಿ ದೂರು ಸಲ್ಲಿಸಿದ್ದರು.

ಈ ಹಿನ್ನಲೆಯಲ್ಲಿ ಬೆಂಗಳೂರು ಉಪ ನಿರ್ದೇಶಕರು ಪ್ರಾಂಶುಪಾಲರನ್ನು ಅಮಾನತುಗೊಳಿಸಿ ಮಾರ್ಚ್ 1 ರಂದು ಆದೇಶಿಸಿದ್ದರು. ಅಲ್ಲದೆ ಮಾರ್ಚ್ 10 ರಂದು ಪ್ರಾಂಶುಪಾಲರ ವಿರುದ್ಧ ಸಂಬಂಧ ಪಟ್ಟ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ದೂರು ದಾಖಲಿಸುವಂತೆ ತಿಳಿಸಿದ ಹಿನ್ನಲೆಯಲ್ಲಿ ಇಂದು ಸಂತ್ರಸ್ತ ಮಹಿಳೆ ಮಂಜುಳಾ ಅವರು ನಜರ್ಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಪ್ರಾಂಶುಪಾಲರ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ.

Desk

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

1 hour ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

2 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

2 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

2 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

2 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

2 hours ago