News Karnataka Kannada
Sunday, May 05 2024
ಮೈಸೂರು

ಹುಟ್ಟೂರಿನಲ್ಲಿ ಜನರ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

Photo Credit :

ಹುಟ್ಟೂರಿನಲ್ಲಿ ಜನರ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಹೋದರನ ಪುತ್ರ ವಿವಾಹ ಸಮಾರಂಭದಲ್ಲಿ ಭಾಗಿಯಾಗಲು ಆಗಮಿಸಿದ ಸಿಎಂ ಸಿದ್ದರಾಮಯ್ಯ ಸ್ವಗ್ರಾಮ ಸಿದ್ದರಾಮನ ಹುಂಡಿಯ ತಮ್ಮ ನಿವಾಸದ ಜಗಲಿಯ ಮೇಲೆ ಕೂತು ಜನರ ಅಹಾವಾಲುಗಳನ್ನು ಸ್ವೀಕರಿಸಿದರು.

ಎರಡು ದಿನಗಳ ಖಾಸಗಿ ಮೈಸೂರು ಪ್ರವಾಸಕ್ಕೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಸ್ವಗ್ರಾಮ ಸಿದ್ದರಾಮನ ಹುಂಡಿಗೆ ಆಗಮಿಸಿ ಮದುವೆಯಲ್ಲಿ ಪಾಲ್ಗೊಂಡು ನಂತರ ತಮ್ಮ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿರುವ ಮನೆಯ ಜಗುಲಿಯಲ್ಲಿ ಕುರ್ಚಿ ಹಾಕಿ ಕುಳಿತು ಗ್ರಾಮದ ಹಿರಿಯರೊಂದಿಗೆ ಲೋಕಾಭಿರಾಮವಾಗಿ ಮಾತುಕತೆ ನಡೆಸಿದ ಸಿದ್ದರಾಮಯ್ಯ ನಂತರ ಗ್ರಾಮಸ್ಥರು ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಅಧಿಕಾರಿಗಳನ್ನ ಕರೆಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಆದೇಶ ನೀಡಿದರು.

ಮೋದಿ ಹವಾ ಕಡಿಮೆಯಾಗಿದೆ
ತಮ್ಮ ಸಹೋದರನ ಮಗನ ಮದುವೆಯಲ್ಲಿ ಪಾಲ್ಗೊಳಲು ಹೊರಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗುಜರಾತ್ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಬಹಳ ಆಶಾದಾಯಕವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಟೇಲ್ ಸಮುದಾಯವಿರುವ ಕಡೆ ನಡೆಸುತ್ತಿರುವ ಸಭೆಗಳೆಲ್ಲಾ ಫ್ಲಾಫ್ ಆಗಿದೆ. ಜನರು ಸೇರುತ್ತಿಲ್ಲ. ಪ್ರಧಾನ ಮಂತ್ರಿ ಅವರು ನಡೆಸುತ್ತಿರುವ ಸಭೆಗಳಲ್ಲಿ ಕೇವಲ 6 ರಿಂದ 7 ಸಾವಿರ ಜನ ಅಂಥದ್ರೆ ಟೋಟಲಿ ಫೇಲ್ಯೂರ್, ಮೋದಿ ಹವಾ ಕಡಿಮೆ ಅಗುತ್ತಾ ಇದೆ. ಏಕೆಂದರೆ ಚುನಾವಣೆಗೆ ಮುನ್ನ ಏನೇನು ಮಾತು ಕೊಟ್ಟಿದ್ರೂ, ಅದೆಲ್ಲಾ ಹುಸಿಯಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
181

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು