Categories: ಮೈಸೂರು

ಹುತ್ತೂರು ಕೆರೆಗೆ ನೀರು ಹರಿಸಲು ಕಾಮಗಾರಿ ಪರಿಶೀಲನೆ

ಗುಂಡ್ಲುಪೇಟೆ: ತಾಲ್ಲೂಕಿನ ಹುತ್ತೂರು ಕೆರೆಗೆ ಭೇಟಿ ನೀಡಿದ ಶಾಸಕ ಸಿ.ಎಸ್.ನಿರಂಜನಕುಮಾರ್ ಹೋಬಳಿಯ ಇತರ ಕೆರೆಗಳಿಗೆ ನೀರುಣಿಸುವ ಕಾಮಗಾರಿಯನ್ನು ಪರಿಶೀಲಿಸಿದರು.

ತಾಲೂಕಿನ ಹುತ್ತೂರು ಕೆರೆಯಿಂದ ಸಮೀಪದ ವಡ್ಡಗೆರೆ ಕೆರೆಗೆ ನೀರೆತ್ತಲು ಪಂಪ್ ಹೌಸ್ ನಿರ್ಮಾಣ ಹಾಗೂ ಪೈಪ್ ಲೈನ್ ಕಾಮಗಾರಿಗಳ ಬಗ್ಗೆ ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ ರಾಜೇಂದ್ರ ಪ್ರಸಾದ್ ಅವರಿಂದ ಮಾಹಿತಿ ಪಡೆದರು.

ಈ ವೇಳೆ ಮಾಹಿತಿ ನೀಡಿದ ಇಂಜಿನಿಯರ್ ರಾಜೇಂದ್ರ ಪ್ರಸಾದ್ ವಡ್ಡಗೆರೆ ಸಮೀಪ ಕೇವಲ 300 ಮೀಟರ್ ಪೈಪ್ ಲೈನ್ ಅಳವಡಿಸಬೇಕಾಗಿದ್ದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಳವಡಿಸಲಾಗಿದ್ದು ಸಂಪರ್ಕವನ್ನೂ ಪಡೆಯಲಾಗಿದೆ. ಮೋಟಾರ್ ಗಳನ್ನು ಸ್ಥಳಕ್ಕೆ ತರಲಾಗಿದೆ. ಹಗಲಿರುಳೂ ಕಾಮಗಾರಿ ನಡೆಸಲಾಗುತ್ತಿದ್ದು ಪಂಪ್ ಹೌಸ್ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ.

ಮುಂದಿನ ತಿಂಗಳಲ್ಲಿ ನೀರು ಹರಿಸಲು ಸಾಧ್ಯವಾಗಲಿದೆ. ಹುತ್ತೂರು ಕೆರೆಯಿಂದ ವಡ್ಡಗೆರೆಕೆರೆಗೆ ಮಾತ್ರ ಪೈಪ್ ಲೈನ್ ಅಳವಡಿಸಿ ಅಲ್ಲಿಂದ ಮುಂದಿನ ಕೆರೆಗಳಿಗೆ ಜಲಮಾರ್ಗದಲ್ಲಿಯೇ ನೀರು ಹರಿಸಿದರೆ ಮಾತ್ರ ಅಂತರ್ಜಲ ವೃದ್ದಿಗೆ ನೆರವಾಗಲಿದೆ ಎಂದರು.

Desk

Recent Posts

ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ : ಆರೋಪಿಗಳು ಸಿಬಿಐ ವಶ

ದಿನ ನಿತ್ಯ ಜನರು ಬಳಸುವ ವಸ್ತುಗಳನ್ನೇ ಟಾರ್ಗೆಟ್ ಮಾಡಿಕೊಂಡ ಗ್ಯಾಂಗ್​ವೊಂದು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಜೊತೆಗೆ…

2 mins ago

ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ…

22 mins ago

ಮತದಾರರು ಮತ್ತು ಜಿಲ್ಲಾಡಳಿತಕ್ಕೆ ಆಲಗೂರ್ ಅಭಿನಂದನೆ

ಜಿಲ್ಲೆಯಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆ ಶಿಸ್ತು ಮತ್ತು ಶಾಂತಿ-ಸುವ್ಯವಸ್ಥೆಯಿಂದ ಕೂಡಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸಂತಸ…

32 mins ago

ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ : ಪ್ರಕರಣ ದಾಖಲು

ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ…

48 mins ago

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಅಂತ್ಯ : ಕ್ಷೇತ್ರಗಳಲ್ಲಿ ಎಷ್ಟು ಮತದಾನ

ಕರ್ನಾಟಕದಲ್ಲಿಂದು (ಮೇ 07) ಲೋಕಸಭೆಗೆ 2ನೇ ಹಂತದಲ್ಲಿ ಮತದಾನ ನಡೆದಿದ್ದು, ಬಾಕಿ ಉಳಿದಿದ್ದ14 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, 227 ಅಭ್ಯರ್ಥಿಗಳ…

1 hour ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ಉದ್ಯೋಗದಲ್ಲಿ ಲಾಭ

ಚಂದ್ರನು ವೃಷಭ ರಾಶಿಯಿಂದ ಬುಧವಾರ ರಾತ್ರಿ 07:20ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ,ಸಿಂಹ, ವೃಶ್ಚಿಕ, ಧನಸ್ಸು, ಮೀನ…

1 hour ago