ಮೈಸೂರು: ಹೆಂಡತಿಯ ನಿಂದನೆಯಿಂದ ಮನನೊಂದ ಪತಿ ನೇಣಿಗೆ ಶರಣಾಗಿರುವ ಘಟನೆ ನಗರದ ಕೆಸರೆಯಲ್ಲಿ ನಡೆದಿದೆ.
ಮೃತನನ್ನು ಪ್ರಶಾಂತ್ (32) ಎಂದು ಗುರುತಿಸಲಾಗಿದ್ದು, ಈತ ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿದ್ದ. ಕಳೆದ 5 ವರ್ಷಗಳ ಹಿಂದೆ ನಗರದ ತೇಜಸ್ವಿನಿ ಎಂಬ ಯುವತಿಯನ್ನು ಮದುವೆಯಾಗಿದ್ದ. ಆದರೆ ಕಳೆದ ಕೆಲವು ದಿನಗಳಿಂದ ಸಂಸಾರದಲ್ಲಿ ಮನಸ್ತಾಪ ಉಂಟಾಗಿ ಈ ಕಲಹ ಪೋಲಿಸ್ ಠಾಣೆಯ ಮೆಟ್ಟಿಲೇರಿತ್ತು.
ಇದರಿಂದ ಬೇಸರಗೊಂಡಿದ್ದ ಪ್ರಶಾಂತ್ ಬೇರೆ ವಾಸವಾಗಿದ್ದ. ನಿನ್ನೆ ಮಗುವನ್ನು ನೋಡಲು ಹೆಂಡತಿ ಮನೆಗೆ ಬಂದಿದ್ದ. ಈ ಸಂದರ್ಭದಲ್ಲಿ ಹೆಂಡತಿ ನಿಂದಿಸಿದಳು ಎನ್ನಲಾಗಿದ್ದು, ಇದರಿಂದ ಮನನೊಂದ ಈತ ಮನೆಗೆ ಹೋಗಿ ನೇಣಿಗೆ ಶರಣಾಗಿದ್ದಾನೆ.
ಎನ್ ಆರ್ ಠಾಣೆಯಲ್ಲಿ ದೂರು ದಾಖಲಾಗಿದ