Categories: ಮೈಸೂರು

ಹೊಸ ವರ್ಷವನ್ನು ಸ್ವಾಗತಿಸಲು ಮೈಸೂರಲ್ಲಿ ಸಿದ್ಧವಾಗುತ್ತಿದೆ 2 ಲಕ್ಷ ಲಾಡು

ಮೈಸೂರು: 2018ನ್ನು ಸಂಭ್ರಮದಿಂದ ಬರಮಾಡಿಕೊಳ್ಳುಲು ಸಾಂಸ್ಕೃತಿಕ ನಗರಿ ಸಜ್ಜಾಗಿದ್ದು, ನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಸ್ಥಾನದಲ್ಲಿ ನೂತನ ವರ್ಷವನ್ನ ಸ್ವಾಗತಿಸಲು ತಿರುಪತಿ ಮಾದರಿಯ 2 ಲಕ್ಷ ಲಾಡುಗಳನ್ನ ಭಕ್ತರಿಗೆ ವಿತರಿಸುವ ಮೂಲಕ ಎಲ್ಲರಿಗೂ ನೂತನ ವರ್ಷ ಒಳ್ಳೆಯದನ್ನ ಮಾಡಲಿ ಎಂದು ವಿಶೇಷ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ನಗರದ ಪ್ರಸಿದ್ದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಸ್ಥನದಲ್ಲಿ ಹೊಸ ವರ್ಷ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿದ್ದು ಬಂದ ಭಕ್ತಾದಿಗಳಿಗೆ ಲಾಡು ವಿತರಿಸಿ ಹೊಸ ವರ್ಷ ಜೀವನದಲ್ಲಿ ಹೊಸ ತನ ತರಲಿ ಎಂದು ಶುಭಾಷಯ ಹೇಳಿ ಭಕ್ತರಿಗೆ ವಿತರಿಸಲು ತಿರುಪತಿಯ ಮಾದರಿಯ 2 ಲಕ್ಷ ಲಾಡುಗಳನ್ನ ಸಿದ್ದಪಡಿಸಿಸಲಾಗುತ್ತಿದೆ.

ಸುಮಾರು 40ಕ್ಕೂ ಹೆಚ್ಚು ಬಾಣಸಿಗರು ಡಿಸೆಂಬರ್ 21 ರಿಂದಲೇ ಹಗಲು-ರಾತ್ರಿ ಲಡ್ಡುಗಳನ್ನು ತಯಾರಿಸಲು ಟೊಂಕ ಕಟ್ಟಿ ನಿಂತಿದ್ದಾರೆ. ಜನವರಿ 1ರಂದು ಮುಂಜಾನೆ 5ರಿಂದ ರಾತ್ರಿ 11ರ ತನಕ ಪ್ರಸಾದ ವಿತರಣೆ ಕಾರ್ಯ ಒಂದು ಕ್ಷಣವೂ ನಿಲ್ಲುವುದಿಲ್ಲ. ಸಾವಿರಾರು ಮಂದಿ ಭಕ್ತರು ಅಂದು ದೇವಾಲಯಕ್ಕೆ ಬಂದು ದರ್ಶನ ಪಡೆಯುತ್ತಾರೆ. ಅವರೆಲ್ಲರಿಗೂ ಸಂತೃಪ್ತಿಯಾಗುವಷ್ಟು ಪ್ರಸಾದ ಕೊಡಲಾಗುತ್ತದೆ. ಇದೇ ಕಾರಣಕ್ಕೆ ಅಂದು ದೇವಾಲಯಕ್ಕೆ ಸಹಸ್ರಾರು ಭಕ್ತ ಸಮೂಹ ದೇವಾಲಯದತ್ತ ಹರಿದುಬರುತ್ತದೆ. ಇದಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿದ್ದರೂ ಕಳೆದ 16 ವರ್ಷಗಳಿಂದ ಈ ಸತ್ಕಾರ್ಯ ಮಾಡುವುದನ್ನು ನಿಲ್ಲಿಸಿಲ್ಲ. ಭಕ್ತರೇ ನಮ್ಮೆಲ್ಲಾ ಸತ್ಕಾರ್ಯಗಳನ್ನು ಮುಂದುವರೆಸುತ್ತಿರುವಾಗ ನನಗೇಕೆ ಹಿಂಜರಿಕೆ ಎನ್ನುತ್ತಾರೆ ದೇವಾಲಯದ ಸಂಸ್ಥಾಪಕರಾದ ಪ್ರೊ. ಶ್ರೀ ಭಾಷ್ಯಂ ಸ್ವಾಮೀಜಿ.

ಲಾಡು ಸಿದ್ದತೆ ಹೇಗೆ: ತಿರುಪತಿ ಮಾದರಿಯ 2 ಲಕ್ಷ ಲಡ್ಡುಗಳನ್ನು ತಯಾರಿಸಲು 40 ಮಂದಿ ಬಾಣಸಿಗರು 15 ದಿನಗಳಿಂದ ಶ್ರಮಿಸುತ್ತಿದ್ದಾರೆ. ಮಾಮೂಲಿ ಲಡ್ಡುಗಳೊಂದಿಗೆ ಗಣ್ಯ ವ್ಯಕ್ತಿಗಳಿಗೂ ಪ್ರತ್ಯೇಕ ಲಡ್ಡುಗಳು ಸಿದ್ಧಗೊಳ್ಳುತ್ತಿವೆ. ಇದಕ್ಕಾಗಿ 1500 ಗ್ರಾಂ ತೂಕದ 5000 ಲಡ್ಡುಗಳು, 100 ಗ್ರಾಂ ತೂಕದ 2 ಲಕ್ಷ ಲಡ್ಡುಗಳು ಸಿದ್ಧಗೊಳ್ಳುತ್ತವೆ. ಎರಡು ಲಕ್ಷ ಲಡ್ಡುಗಳನ್ನು ತಯಾರಿಸಲು 50 ಕ್ವಿಂಟಾಲ್ ಕಡ್ಲೆ ಹಿಟ್ಟು, 100 ಕ್ವಿಂಟಾಲ್ ಸೆಕ್ಕರೆ, 4000 ಲೀಟರ್ ಖಾದ್ಯ ತೈಲ, 100 ಕೆ.ಜಿ ಗೋಡಂಬಿ, 100 ಕೆ.ಜಿ ಒಣದ್ರಾಕ್ಷಿ, 50 ಕೆ.ಜಿ ಬಾದಮಿ, 50 ಕೆ.ಜಿ ಡೈಮಂಡ್ ಸಕ್ಕರೆ, 500 ಕೆ.ಜಿ ಬೂರಾ ಸಕ್ಕರೆ, 10 ಕೆ.ಜಿ ಪಿಸ್ತಾ, 20 ಕೆ.ಜಿ ಏಲಕ್ಕಿ, 20 ಕೆ.ಜಿ ಜಾಕಾಯಿ ಮತ್ತು ಜಾಪತ್ರೆ, 5 ಕೆ.ಜಿ ಪಚ್ಚೆ ಕರ್ಪೂರ, 50 ಕೆ.ಜಿ ಲವಂಗವನ್ನು ಬಳಸಲಾಗುತ್ತಿದೆ.

ಜೊತೆಗೆ 10 ಕ್ವಿಂಟಾಲ್ ಪುಲಿಯೊಗರೆಯನ್ನ ಭಕ್ತಾಧಿಗಳಿಗೆ ವಿತರಿಸಲಾಗುತ್ತಿದ್ದು, ಜಾತಿ, ಮತ, ಪಂಥದ ಇಲ್ಲದೆ ಸಮಾಜ ಶಾಂತಿಯಿಂದಿರಬೇಕು. ಸಮಾಜದಲ್ಲಿರುವ ಜಾತಿ, ಮತ, ವರ್ಗದವರೆಲ್ಲರೂ ಸಹಬಾಳ್ವೆಯಿಂದ ಬದುಕಬೇಕೆಂಬ ಆಶಯ ನಮ್ಮದೊಂದು ಸಣ್ಣ ಪ್ರಯತ್ನ ಎನ್ನುತ್ತಾರೆ ದೇವಾಲಯದ ಆಡಳಿತಾಧಿಕಾರಿ.

Desk

Recent Posts

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

35 seconds ago

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

16 mins ago

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

48 mins ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

51 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

1 hour ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

1 hour ago