ಮೈಸೂರು: ವಿದ್ಯಾರ್ಥಿಗಳಿಗೆ ಸೇರಬೇಕಾದ 2 ಕೋಟಿ ರೂ. ವಿದ್ಯಾರ್ಥಿ ವೇತನ ಹಣವನ್ನು ಸಿಬ್ಬಂದಿಯೇ ಗುಳುಂ ಮಾಡಿರುವ ಘಟನೆ ನಗರದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಾದ ಎಸ್ ಜೆಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿಯ ಸಿಬ್ಬಂದಿ ಪ್ರಕಾಶ ಎಂಬವನು 2008ರಿಂದ 2013ರವರೆಗೆ ವಿದ್ಯಾರ್ಥಿಗಳಿಗೆ ಸೇರಬೇಕಾದ 2 ಕೋಟಿ ರೂ. ಹಣವನ್ನು ಬೋಗಸ್ ರಶೀದಿಗಳನ್ನು ಸೃಷ್ಟಿಸಿ ಲಪಟಾಯಿಸಿದ್ದು, ಈ ಬಗ್ಗೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ನಾಗಭೂಷನ್ ಸಿಬ್ಬಂದಿ ವಿರುದ್ದ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.