ಮೈಸೂರು: ಈ ಸರ್ಕಾರ ಬಂದಮೇಲೆ ರಾಜ್ಯದಲ್ಲಿ 2 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ರೈತರ ಮೇಲೆ ಕಾಳಜಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.
32 ಲಕ್ಷ ರೈತರಿಗೆ 24 ಸಾವಿರ ಕೋಟಿ ಹಣ ಕೊಡ್ತೀನಿ ಅಂದಿದ್ರು 12 ಸಾವಿರ ಕೋಟಿ ಕೊಟ್ಟಿದ್ದಾರೆ. ಇದು ಈ ಸರ್ಕಾರದ ವೈಫ್ಯಲ್ಯ.ರಾಜ್ಯದ ಭ್ರಷ್ಟಾಚಾರ ಬಗ್ಗೆ ಸುಧೀರ್ಘವಾಗಿ ಇನ್ನೊಂದು ದಿನ ಮಾತನಾಡುತ್ತೇನೆ.
ದ್ವೇಷ ಭಾಷಣ ಬಿಲ್ ವಿಚಾರವಾಗಿ ಪ್ರಧಾನಿಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಹೇಗೆ ರಿಯಾಕ್ಟ್ ಮಾಡಿದ್ದಾರೆ ಅಂತ ಮೊದಲು ತಿಳಿದುಕೊಳ್ಳಲಿ ಎಂದು ದ್ವೇಷ ಭಾಷಣ ಬಿಲ್ ಬಗ್ಗೆ ವ್ಯಂಗ್ಯವಾಡಿದರು.

