ಮೈಸೂರು: ಕುಮಾರಸ್ವಾಮಿ ತಮ್ಮ ವಿರುದ್ದ ಒಳ ಒಪ್ಪಂದದ ಆರೋಪ ವಿಚಾರಕ್ಕೆ ಇಂದು ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೋಪಾಲಯ್ಯನಿಗೆ ಟಿಕೆಟ್ ಕೊಟ್ಟವರು ಯಾರು? ಅವರು ಹೇಳಿದ್ದಕ್ಕೆಲ್ಲ ಉತ್ತರ ಕೊಡೋಕೆ ಆಗಲ್ಲ. ಜೆ.ಡಿ.ಎಸ್ ಬಿಜೆಪಿಯವರು 29 ಕ್ಷೇತ್ರಗಳಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದರು. ಎಲ್ಲಾ ಕ್ಷೇತ್ರಗಳಲ್ಲೂ ಅವರು ಮಾಡಿಕೊಂಡಿರಲಿಲ್ಲ. ನಿನ್ನೆ ನಾನು ಅದನ್ನೆ ಹೇಳಿದ್ದು ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದರು.
ಕುಮಾರಸ್ವಾಮಿ ಹೋಟೆಲ್ ನಲ್ಲಿ ಮೊದಲೆ ರೂಂ ಮಾಡಿಕೊಂಡಿದ್ದ. ನಾನು ಮನೆ ಬಿಟ್ಟಿಲ್ಲ ಎಂಬುದೆಲ್ಲ ಸುಳ್ಳು ಎಂದು ಸಾ.ರಾ.ಮಹೇಶ್ ಅವರಿಗೆ ತಿರುಗೇಟು ನೀಡಿದರು. ನಾನು ಅವರ ಬಗ್ಗೆ ಎಲ್ಲ ಮಾತನಾಡಲ್ಲ. ಕುಮಾರಸ್ವಾಮಿ ಹೋಟೆಲ್ ನಲ್ಲಿ ಉಳಿದಿದ್ದು ನಿಜವೋ ಇಲ್ಲವೋ? ಅದು ನಿಜವಾದ ಮೇಲೆ ಅದರ ಮೇಲೆ ಚರ್ಚೆ ಮಾಡಲು ಏನೂ ಇಲ್ಲ ಎಂದರು.
ಕಾಂಗ್ರೆಸ್ ನವರು ನನ್ನನ್ನು ಸೋಲಿಸಿದ್ರು ಅಂತ ಹೇಳಿದ್ದೆ. ನಾನು ಹೇಳಿದ್ದು ಚಾಮುಂಡೇಶ್ವರಿ ಕ್ಷೇತ್ರದ ಸ್ಥಳೀಯ ಮುಖಂಡರ ಬಗ್ಗೆ. ನಾನು ಯಾರ ಹೆಸರನ್ನೂ ಹೇಳಿಲ್ಲ. ಸ್ಥಳೀಯರ ಬಗ್ಗೆ ಅಷ್ಟೆ ಹೇಳಿದ್ದು ಎಂದರು.
ನಾನು ಜನತಾ ಪರಿವಾರದಲ್ಲಿದ್ದಾಗ 60 ಸೀಟು ಗೆಲ್ಲುತ್ತಿದ್ದೆವು. ಈಗ ಅವರು 29 ಸೀಟಿಗೆ ಬಂದಿದ್ದಾರೆ. ಜೆ.ಡಿ.ಎಸ್ ಬಗ್ಗೆ ನಾನು ಹೇಳುವುದು ಇಷ್ಟೆ ಎಂದರು.
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…
ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.
ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…