ಮೈಸೂರು

ಬಿಯರ್‌ನಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆ

ಮೈಸೂರು: ಬಿಯರ್ ನಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ. ಹೀಗಾಗಿ, 25 ಕೋಟಿ ರೂಪಾಯಿ ಮೌಲ್ಯದ 78,678 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂಜನಗೂಡಿನಲ್ಲಿರುವ ಕಂಪನಿ ತಯಾರಿಸಿದ್ದ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಕಂಡುಬಂದಿದೆ. ಕಂಪನಿಯ ಸ್ಟ್ರಾಂಗ್ ಹಾಗೂ ಅಲ್ಟಾ ಲ್ಯಾಗರ್ ಬ್ರ್ಯಾಂಡ್‌ಗಳಲ್ಲಿ ಈ ಅಂಶವಿರುವುದು ಬೆಳಕಿಗೆ ಬಂದಿದೆ.

ಮಾಹಿತಿ ತಿಳಿದ ಕೂಡಲೇ ಬಿಯರ್ ಮಾದರಿಯನ್ನು ಕೆಮಿಕಲ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈ ಕುರಿತು 2-08-2023ರಂದು ವರದಿ ಬಂದಿದ್ದು ‘ಅನ್‌ಫಿಟ್ ಫಾರ್ ಹ್ಯುಮನ್ ಕನ್ಸಂಪ್ಪನ್’ ಎಂದು ತಿಳಿಸಲಾಗಿದೆ. ಇದೇ ಅವಧಿಯಲ್ಲಿ ಒಟ್ಟು 78,678 ಬಾಕ್ಸ್ ಬಿಯರ್ ಬಾಕ್ಸ್ ಸರಬರಾಜಾಗಿತ್ತು. ಹೀಗಾಗಿ ಎಲ್ಲ ಬಾಕ್ಸ್‌ಗಳನ್ನೂ ತಡೆಹಿಡಿಯಲಾಗಿದೆ. ಕೆಲವು ಡಿಪೋದಿಂದ ಅಂಗಡಿಗಳಿಗೂ ವಿತರಣೆಯಾಗಿತ್ತು. ರಿಟೈಲ್‌ನಲ್ಲೂ ಮಾರಾಟವಾಗದಂತೆ ತಡೆಹಿಡಿಯಲಾಗಿದೆ. ಗುಣಮಟ್ಟದ ಬಿಯರ್ ತಯಾರಿಸದ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂಜನಗೂಡಿನ ಯುನೈಟೆಡ್ ಬ್ರಿವರೀಸ್ ಘಟಕಕ್ಕೆ ಅಧಿಕಾರಿಗಳು ಪತ್ರ ಬರದಿದ್ದು, ಬ್ಯಾಚ್ ಸಂಖ್ಯೆ 7ಇ ರಲ್ಲಿನ ಕಿಂಗ್ ಫಿಶರ್ ಸ್ಟ್ರಾಂಗ್ ಬಿಯರ್ ಮತ್ತು ಅಲ್ಲಾ ಬಿಯರ್‌ನಲ್ಲಿ ಸೆಡಿಮೆಂಟ್ ಕಂಡುಬಂದ ಕಾರಣ ರಾಸಾಯನಿಕ ವಿಶ್ಲೇಷಣೆಗೆ ಕಳುಹಿಸಲಾಗಿದ್ದು, ವರದಿ ಬರುವವರೆಗೂ ಈ ಬ್ರಿವರಿಯಿಂದ ಬಿಯರ್ ಸರಬರಾಜು ಮಾಡದಂತೆ ತಿಳಿಸಿದ್ದರು.

Ashika S

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

11 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

17 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

32 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

48 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago