ಮೈಸೂರು: ಆಸ್ತಿ ವಿಚಾರಕ್ಕೆ ಜಗಳ ನಡೆದು ಮಗನೊಬ್ಬ ತಂದೆಗೆ ಚಾಕು ಇರಿದ ಘಟನೆ ಮೈಸೂರಿನ ತಿ. ನರಸೀಪುರ ತಾಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ.
ರಾಚಪ್ಪಾಜಿ (60) ಮಗನಿಂದಲೇ ಚಾಕು ಇರಿತಕ್ಕೆ ಒಳಗಾದ ತಂದೆ. ರಾಚಪ್ಪಾಜಿ ಅವರ ಮಗ ಸುಭಾಷ್ ಎಂಬಾತ ತನ್ನ ಸ್ನೇಹಿತರೊಟ್ಟಿಗೆ ಸೇರಿ ತಂದೆಗೆಯೇ ಚಾಕುವಿನಿಂದ ಇರಿದಿದ್ದಾನೆ. ರಾಚಪ್ಪಾಜಿ ಜತೆ ಇದ್ದ ಮಹದೇವ್ ಎಂಬುವವರ ಮೇಲೂ ದಾಳಿ ಮಾಡಿದ್ದಾನೆ. ಗಂಭೀರ ಗಾಯಗೊಂಡ ರಾಚಪ್ಪಾಜಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಈ ಸಂಬಂಧ ಪ್ರಕರಣ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಮಗನ ಈ ಕೃತ್ಯಕ್ಕೆ ಗ್ರಾಮಸ್ಥರು ಕಿಡಿಕಾರಿದ್ದಾರೆ.