ನಂಜನಗೂಡು: ಮುಂಗಾರು ಮಳೆ ಬಿದ್ದು ಕೃಷಿ ಚಟುವಟಿಕೆ ಪ್ರಾರಂಭಗೊಂಡಿದ್ದರು ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಸಿಗದೇ ರೈತರು ಕಂಗಾಲಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಕೃಷಿ ಇಲಾಖೆಯಲ್ಲಿ ಬಿತ್ತನೆ ಬೀಜ ದಾಸ್ತಾನು ಇದ್ದರೂ ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ನೀಡದ ನೀಡುತ್ತಿಲ್ಲ. ಬಿತ್ತನೆ ಬೀಜ ನೀಡುವಂತೆ ನೂರಾರು ರೈತರು ಕೃಷಿ ಇಲಾಖೆ, ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋ ಶ ವ್ಯಕ್ತಪಡಿಸಿದ್ದಾರೆ.
ರೈತರ ಬಗ್ಗೆ ತಲೆಕೆಡಿಸಿಕೊಳ್ಳದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ.
ತಾಲೂಕಿನ ವಿವಿಧ ಕಡೆಯಿಂದ ಆಗಮಿಸಿದ ನೂರಾರು ರೈತರು ಬಿತ್ತನೆ ಬೀಜ ನೀಡುವಂತೆ ಕಚೇರಿಯಲಿದ್ದ ಸಹಾಯಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಂಬಂಧಪಟ್ಟ ಮೇಲಾಧಿಕಾರಿಗಳು ಬಂದು ಬಿತ್ತನೆ ಬೀಜ ವಿತರಣೆ ಮಾಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ರೈತರು ಬಿಗಿ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.
ಬಳಿಕ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್ ಮಾತನಾಡಿ ಮುಂಗಾರು ಮಳೆ ಪ್ರಾರಂಭವಾಗಿದ್ದರು ಬಿತ್ತನೆ ಬೀಜ ನೀಡುವಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿಫಲವಾಗಿದ್ದು ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಇದೇ ರೀತಿ ಮುಂದುವರೆದರೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿ ಸಾಧ್ಯವಾದರೆ 75 ಭಾಗ ರೈತರೇ ಇರುವ ನಾವು ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದರು .