News Karnataka Kannada
Saturday, May 04 2024
ಮೈಸೂರು

ಶ್ರೀನಂಜುಂಡನ ಸನ್ನಿಧಿಯಲ್ಲಿ ಭಕ್ತರಿಗೆ ಮತದಾನ ಅರಿವು

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಬೃಹತ್ ರಂಗೋಲಿ ಬಿಡಿಸಿ ಸುತ್ತಲೂ‌ ಮಣ್ಣಿನ ಹಣತೆ, ಕ್ಯಾಂಡಲ್ ಬೆಳಗುವ ಮೂಲಕ ನಂಜನಗೂಡು ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿಯು ಅಪಾರ ಭಕ್ತರಿಗೆ ಮತದಾನ ಜಾಗೃತಿ ಮೂಡಿಸಿದರು.
Photo Credit : NewsKarnataka

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಬೃಹತ್ ರಂಗೋಲಿ ಬಿಡಿಸಿ ಸುತ್ತಲೂ‌ ಮಣ್ಣಿನ ಹಣತೆ, ಕ್ಯಾಂಡಲ್ ಬೆಳಗುವ ಮೂಲಕ ನಂಜನಗೂಡು ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿಯು ಅಪಾರ ಭಕ್ತರಿಗೆ ಮತದಾನ ಜಾಗೃತಿ ಮೂಡಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಆರ್ ಎಲ್ ಎಂ ಸಂಘದ ಮಹಿಳೆಯರು ದೇಗುಲದ ಮುಂಭಾಗ ರಂಗೋಲಿಯಲ್ಲಿ ಬಿಡಿಸಿದ್ದ ಇ.ವಿ.ಎಂ ಯಂತ್ರ, ತೋರು ಬೆರಳಿಗೆ ಶಾಹಿ ಗುರುತು, ಮತದಾನ ಕುರಿತ ಘೋಷವಾಕ್ಯಗಳು ನೆರದಿದ್ದ ಭಕ್ತರ ಗಮನ ಸೆಳೆಯಿತು. ರಂಗೋಲಿ ಸುತ್ತಲೂ ಮಣ್ಣಿನ ಹಣತೆ, ಕ್ಯಾಂಡಲ್ ಬೆಳಗಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಜಗನಾಥ್ ಮೂರ್ತಿ, ಸದೃಢ ಸಮಾಜ ನಿರ್ಮಿಸಲು ಪ್ರತಿಯೊಬ್ಬರ ಮತವು ಅತ್ಯಗತ್ಯ. ಸಂವಿಧಾನಿಕ ಮತದಾನದ ಹಕ್ಕನ್ನು ಯಾರೊಬ್ಬ ಅರ್ಹರು ಬಿಟ್ಟುಕೊಡಬಾರದು. ಏಪ್ರಿಲ್ 26 ರಂದು ನಿಮ್ಮ ನಿಮ್ಮ ಮತಗಟ್ಟೆಗಳತ್ತ ಹೆಜ್ಜೆ ಹಾಕಿ ಎಂದರು. ಬಳಿಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಮಾತನಾಡಿ, ಈ ಚುನಾವಣೆಯು ಒಂದು ಹಬ್ಬವಿದ್ದಂತೆ, ಪ್ರತಿಯೊಬ್ಬರು ಹಕ್ಕು ಚಲಾಯಿಸಲು‌ ಉತ್ಸುಕತೆ ತೋರಬೇಕು. ಮತಹಾಕುವ ಮೂಲಕ ಹಬ್ಬ ಆಚರಿಸಬೇಕು ಎಂದು‌ ಕರೆ ನೀಡಿದರು. ಬಳಿಕ ವಿವಿಧೆಡೆಯಿಂದ‌ ಆಗಮಿಸಿದ್ದ ಭಕ್ತರಿಗೆ ಮತದಾನ‌ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ನರೇಗಾ ಸಹಾಯಕರಾದ ಶಿವಕುಮಾರ್, ಕಾವ್ಯ, ತಾಲ್ಲೂಕು ಸ್ವೀಪ್ ಸಮಿತಿ ಸದಸ್ಯರು, ಎನ್.ಆರ್.ಎಲ್.ಎಂ. ಸಿಬ್ಬಂದಿ ಹಾಜರಿದ್ದರು‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು