ಮೈಸೂರು

ನಂಜನಗೂಡಿನಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ

ನಂಜನಗೂಡು: ಬಸವ ಜಯಂತಿಯನ್ನು ಅದ್ಧೂರಿಯಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಂಜನಗೂಡು ನಗರದ ದೇವಿರಮ್ಮನಹಳ್ಳಿ ಗೇಟ್ ನಲ್ಲಿ ಬೆಳ್ಳಿ ರಥದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಬಸವ ಬಳಗದ ಒಕ್ಕೂಟದ ಪದಾಧಿಕಾರಿಗಳು ಚಾಲನೆ ನೀಡಿದರು.

ನಗರದ ರಾಷ್ಟ್ರಪತಿ ರಸ್ತೆ, ಮಹಾತ್ಮ ಗಾಂಧಿ ರಸ್ತೆ, ಹುಲ್ಲಹಳ್ಳಿ ವೃತ್ತ , ಮೈಸೂರು ಊಟಿ ರಸ್ತೆಯ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ವೀರಗಾಸೆ, ಕರಡಿ ಮಜಲು, ನಂದಿಕೋಲ ಕುಣಿತ ಹಾಗೂ ವಿವಿಧ ವಾದ್ಯ ಮೇಳಗಳು ಭಾಗವಹಿಸಿ ಮೆರುಗು ತುಂಬಿದವು. ಶರಣರ ರೂಪಕಗಳನ್ನೊಳಗೊಂಡ ಸ್ತಬ್ಧಚಿತ್ರ ಮೆರವಣಿಗೆ ಗಮನ ಸೆಳೆಯಿತು. ಬಸವ ಜಯ ಘೋಷ, ವಚನಗಳ ಘೋಷಣೆಗಳು, ಭಜನೆಯ ಗೀತೆಗಳು ಮೊಳಗಿದವು.

ಅನುರಾಗ ಮಕ್ಕಳ ಮನೆಯ ಅಧ್ಯಕ್ಷ ಸೋಮಶೇಖರ್ ಮೂರ್ತಿ ಮಾತನಾಡಿ,ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸರಳವಾಗಿ ಬಸವ ಜಯಂತಿಯನ್ನು ಆಚರಣೆ ಮಾಡುತ್ತಿದ್ದೇವೆ. ನಂಜನಗೂಡಿನ 20 ಸಂಘಟನೆಗಳಿಂದ ಬಸವ ಬಳಗ ಒಕ್ಕೂಟದಿಂದ ಆಚರಣೆ ಮಾಡುತ್ತಿದ್ದೇವೆ. ಮಹಾ ಮಾನವತವಾದಿ ಬಸವಣ್ಣನವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಮೂಡನಂಬಿಕೆಯ ವಿರುದ್ಧ ಜನರು ಹೊರಬಂದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು. ನಂಜನಗೂಡು ಬಸವ ಬಳಗದ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದರು.

Ashika S

Recent Posts

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿತ್ತು ಸಂದೇಶ

ಶಾಲೆಗಳ ಬಾಂಬ್‌ ಬೆದರಿಕೆ ಬೆನ್ನಲ್ಲೆ ಇದೀಗ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್​ನಲ್ಲಿದ್ದ ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ…

19 mins ago

ಸಾಕು ನಾಯಿ ವಿಚಾರಕ್ಕೆ ಮಾಲೀಕನಿಗೆ ಐವರಿಂದ ಹಲ್ಲೆ: ಆರೋಪಿಗಳು ಅರೆಸ್ಟ್‌

ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…

46 mins ago

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

52 mins ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

1 hour ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

1 hour ago

ಮಹತ್ವದ ತೀರ್ಪಿನಲ್ಲಿ ಇಡಿ ಕಾರ್ಯಗಳಿಗೆ ಕಡಿವಾಣ ಹೇರಿದ ಸುಪ್ರೀಂ ಕೋರ್ಟ್‌ !

ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ…

1 hour ago