ಮೈಸೂರು: ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು ಕಾಲೇಜಿನ ಕಾರ್ಯದರ್ಶಿ ಅಪೂರ್ವ ಲಕ್ಷ್ಮಣ್ ಎಂಬುವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ. ಸಂಸ್ಥೆಯ ಹೆಚ್ಚುವರಿ ಕಾರ್ಯದರ್ಶಿಯಾದ ಡಾ.ಸುಮರಾಂಗನಾಥ್ ಪ್ರಕರಣ ದಾಖಲಿಸಿದ್ದಾರೆ.

2025 ರಿಂದ ಇಲ್ಲಿಯವರೆಗೂ ಅಪೂರ್ವ ಲಕ್ಷ್ಮಣ್ ರವರು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನು ತಮ್ಮ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ. 30 ಲಕ್ಷ ಹಣವನ್ನು ವಂಚಿಸಿದ ಅಪೂರ್ವ ಲಕ್ಷ್ಮಣ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ.