News Karnataka Kannada
Sunday, May 05 2024
ಮೈಸೂರು

ಹೆಗ್ಗಡಹಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದೆ ಬಿಜೆಪಿ ಅಭ್ಯರ್ಥಿ

ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಬಿಜೆಪಿ ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು ಉದ್ಘಾಟಿಸಿ ಮಾತನಾಡಿದರು. ಈ ದೇಶದ ಭವಿಷ್ಯ ಬರೆಯಲು ನಿಮಗೆ ಅವಕಾಶ ಕೊಟ್ಟಿದ್ದಾರೆ.
Photo Credit : NewsKarnataka

ಮೈಸೂರು : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಬಿಜೆಪಿ ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು ಉದ್ಘಾಟಿಸಿ ಮಾತನಾಡಿದರು. ಈ ದೇಶದ ಭವಿಷ್ಯ ಬರೆಯಲು ನಿಮಗೆ ಅವಕಾಶ ಕೊಟ್ಟಿದ್ದಾರೆ.

ಯಾರನ್ನು ಗೆಲ್ಲಿಸಬೇಕು ಎಂಬುದು ಮತದಾರರ ತೀರ್ಮಾನವಾಗಿದೆ. ನನಗೆ 32 ವರ್ಷಗಳ ರಾಜಕೀಯ ಅನುಭವವಾಗಿದೆ. ನನ್ನ ರಾಜಕೀಯ ಗುರುಗಳಾದ ರಾಜಶೇಖರ ಮೂರ್ತಿ ಅವರು ನನಗೆ ಸಾಕಷ್ಟು ಸಹಾಯವನ್ನು ಮಾಡಿ ನನ್ನ ಬೆಳವಣಿಗೆಗೆ ಕಾರಣರಾದವರು.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದಾಗ ಸೋಲು ಅನುಭವಿಸಿದ್ದೆ. 32 ವರ್ಷಗಳ ರಾಜಕೀಯ ಜೀವನದಲ್ಲಿ ನನಗೆ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರ ಕೈಯನ್ನು ನಾವು ಬಲಪಡಿಸಬೇಕಿದೆ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ಹಾಗಾಗಿ ನನಗೆ ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಹರ್ಷವರ್ಧನ್, ಅಶೋಕ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಎಲ್, ಆರ್, ಮಹದೇವಸ್ವಾಮಿ, ನಿಕಟಪೂರ್ವ ಜಿಲ್ಲಾ ಅಧ್ಯಕ್ಷರಾದ ಮಂಗಳ ಸೋಮಶೇಖರ್, ಪಿ, ಮಹೇಶ್, ಜಿಲ್ಲಾ ಯುವ ಮೋರ್ಚ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಿಕ್ಕರಂಗನಾಯ್ಕ , ಜೆಡಿಎಸ್ ಜಿಲ್ಲಾ ಅಧ್ಯಕ್ಷ ನರಸಿಂಹ ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು