ಮೈಸೂರು

ಬಿಜೆಪಿಯ ಅಥಿರಥ ಮಹಾರಥರು ಸಿದ್ದರಾಮಯ್ಯ ಅವರೊಂದಿಗೆ ಶಾಮೀಲು: ಪ್ರತಾಪ್‌ ಸಿಂಹ

ಮೈಸೂರು: ಬಿಜೆಪಿಯ ಕೆಲ ನಾಯಕರ ಜೊತೆ ಹೊಂದಾಣಿಕೆ ಇಲ್ಲವೆಂದರೆ ನೀವು ಈ ಹಿಂದೆ ಮಾಡುತ್ತಿದ್ದ ಆರೋಪಗಳ ಬಗ್ಗೆ ತನಿಖೆಗೆ ಆದೇಶ ಮಾಡಿ ಎಂದು ಸಂಸದ ಪ್ರತಾಪ್‌ ಸಿಂಹ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

ಬಿಜೆಪಿಯ ಕೆಲ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಬಿಜೆಪಿ ಸರಕಾರ ಮೇಲಿನ‌ 40 ಪರ್ಸೆಂಟ್ ಆರೋಪದ ಬಗ್ಗೆ ಯಾಕೆ ದೂರು ಕೊಟ್ಟಿರಲಿಲ್ಲ. ಕೆಂಪಣ್ಣ ಅವರ ಬರೆದ ಪತ್ರ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಊರಿಗೆಲ್ಲ ತಮಟೆ ಹೊಡೆದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ವಿರುದ್ದ ರೀ ಡೂ, ಅರ್ಕಾವತಿ ಡಿ ನೋಟಿಫೀಕೇಷ್, ಕೆಂಪಣ್ಣ ಆಯೋಗ ವರದಿ ಅಬ್ಬರಿಸುತ್ತಿದ್ದರು. ಆದರೆ ನಮ್ಮವರು ಒಂದು ದಿನವೂ ಹಾವಿನ ಪೆಟ್ಟಿಗೆಯಿಂದ ಹಾವು ಹೊರಗೆ ಬಿಡಲೇ ಇಲ್ಲ ಎಂದರು.

ಇನ್ನು ಸಿದ್ದರಾಮಯ್ಯ ಕೂಡ ಬಿಜೆಪಿ ಮೇಲೆ ಪಿಎಸ್ಐ ಹಗರಣ, ಬಿಟ್ ಕಾಯಿನ್ ಎಂದು ಅಬ್ಬರಿಸುತ್ತಿದ್ದರು. ಈಗ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಿದ್ದರಾಮಯ್ಯ ಅವರೆ ನಿಮ್ಮ ಮತ್ತು ಬಿಜೆಪಿಯ ಕೆಲ ನಾಯಕರ ಜೊತೆ ಹೊಂದಾಣಿಕೆ ಇಲ್ಲವೆಂದರೆ ನೀವು ಮಾಡುತ್ತಿದ್ದ ಆರೋಪಗಳ ಬಗ್ಗೆ ತನಿಖೆಗೆ ಆದೇಶ ಮಾಡಿ ಎಂದಿದ್ದಾರೆ.

ಸಿದ್ದರಾಮಯ್ಯ ಅವರೇ ನಿಮ್ಮ ಬಗ್ಗೆ ಬಿಜೆಪಿಯ ಕೆಲವು ಅತಿರಥ ಮಹಾರಥರು ಮಾತಾಡದೆ ಇರಬಹದು. ಕೆಲವರು ಶಾಮೀಲು ಆಗಿರಬಹುದು ಬಿಜೆಪಿ ಕಾರ್ಯಕರ್ತ ಯಾವತ್ತೂ ನಿಮ್ಮ ಜೊತೆ ಶಾಮೀಲು ಆಗಿಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದಾರೆ.

Umesha HS

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

14 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

38 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

57 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago