ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರ ಚಾಮುಂಡಿ ಬೆಟ್ಟಕ್ಕೆ ಬಾಲಿವುಡ್ ನಟ ಸಂಜಯ್ ದತ್ ಹಾಗೂ ಕೆ.ಡಿ. ಚಿತ್ರ ತಂಡ ಭೇಟಿ ನೀಡಿ ನಾಡದೇವತೆ ದರ್ಶನ ಪಡೆದಿದ್ದಾರೆ. ಹಾಗೆಯೆ ಇದೆ ವೇಳೆ ಸಂಜಯ್ ದತ್ ಅವರು ಸೌತ್ ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ.
ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ಭಕ್ತಸಾಗರವೆ ನರೆದಿತ್ತು. ವಾರಾಂತ್ಯವೂ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆ ಆಗಿರಲಿಲ್ಲ. ಸದ್ಯ ಕೆಡಿ ಚಿತ್ರ ತಂಡದ ಬಾಲಿವುಡ್ ನಟ ಸಂಜಯ್ ದತ್, ನಿರ್ದೇಶಕ ಪ್ರೇಮ್ ಹಾಗೂ ನಟ ಶೋಭಾರಾಜ್ ಚಾಮುಂಡಿ ತಾಯಿಯ ಆಶೀರ್ವಾದ ಪಡೆದರು.
ಮೈಸೂರಿನಲ್ಲೇ ಕೆಡಿ ಚಿತ್ರ ಚಿತ್ರೀಕರಣ ನಡೆಯುತ್ತಿದ್ದು, ಹಾಗಾಗಿ ಚಿತ್ರ ತಂಡ ತಾಯಿ ದರ್ಶನಕ್ಕೆ ಆಗಮಿಸಿತ್ತು. ಚಾಮುಂಡಿ ತಾಯಿಯ ದರ್ಶನ ಪಡೆದ ಬಳಿಕ ಬಾಲಿವುಡ್ ನಟ ಸಂಜಯ್ ದತ್ ಮಾತನಾಡಿ, ಹಲವು ಬಾರಿ ಮೈಸೂರಿಗೆ ಬಂದಿದ್ದೇನೆ. ತಾಯಿಯ ಆಶೀರ್ವಾದ ಪಡೆಯಲು ಸಾಧ್ಯವಾಗಿರಲಿಲ್ಲ. ಈಗ ಚಾಮುಂಡಿ ತಾಯಿಯ ದರ್ಶನವಾಗಿದೆ ಎಂದರು.