ಕೊಳ್ಳೇಗಾಲ : ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಒಬ್ಬನನ್ನು ಬಂಧಿಸಿ 32 ಕೆಜಿ ತೂಕದ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.
ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಸಿದ್ದು(19) ಬಂಧಿತ ಆರೋಪಿ. ಮತ್ತೊಬ್ಬ ಗುಳ್ಳಪುಟ್ಟ ಎಂಬಾತ ಪರಾರಿಯಾಗಿದ್ದಾರೆ. ಆರೋಪಿಗಳು ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದ ಹಿಂಭಾಗದ ಕಬಿನಿ ಚಾನಲ್ ರಸ್ತೆಯಲ್ಲಿ ಬೈಕ್ ನಲ್ಲಿ ಗಂಧದ ಮರದ ಆರು ತುಂಡುಗಳನ್ನು ಸಾಗಿಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಸಿಐಡಿ ಅರಣ್ಯ ಸಂಚಾರಿ ದಳದ ಪ್ರಭಾರ ಎಸ್ಐ ದಿಕ್ಷೀತ್ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಹಿತ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅರಣ್ಯ ಸಿಐಡಿ ಅರಣ್ಯ ಸಂಚಾರಿ ದಳದ ಮುಖ್ಯಪೇದೆ ರಾಮಚಂದ್ರ, ತಖೀವುಲ್ಲಾ, ಬಸವರಾಜು, ಸ್ವಾಮಿ, ಚಾಲಕ ಜಾಫರ್ ಇದ್ದರು.