ಕೊಳ್ಳೇಗಾಲ: ಪೊಲೀಸರ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ 15 ಜನರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪ್ರಗತಿಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಶಾಸಕ ಎನ್.ಮಹೇಶ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ನಗರ ಪೊಲೀಸ್ ಠಾಣೆಯಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಮಣಿ ಪ್ರತಿಭಟನೆ ನಡೆಸಲು ಅನುಮತಿಗಾಗಿ ಮನವಿ ಮಾಡಿದ್ದರು. ಆದರೆ ಠಾಣೆಯ ಪಿಎಸ್ಐ ಚೇತನ್ ಕೋವಿಡ್–19 ನಿಯಮದಡಿಯಲ್ಲಿ ಅನುಮತಿ ನಿರಾಕರಿಸಿದ್ದರು. ಆದರೆ ಪ್ರತಿಭಟನಕಾರರು ನಗರದ ಪ್ರಮುಖ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ನಡೆಸುವಾಗ ಕೋವಿಡ್–19 ನಿಯಮ ಹಾಗೂ ಅನುಮತಿ ನಿರಾಕರಿಸಿದ್ದರೂ ಸಹ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು 15 ಜನರ ವಿರುದ್ಧ ಠಾಣೆಯಲ್ಲಿ ದೂರು ದಾಖಲಾಗಿದೆ.
ಅನುಮತಿ ಇಲ್ಲದೆ ಶಾಸಕ ಎನ್ ಮಹೇಶ್ ವಿರುದ್ದ ಪ್ರತಿಭಟನೆ: 15 ಜನರ ವಿರುದ್ಧ ಪ್ರಕರಣ ದಾಖಲು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.