ಹನಗೋಡು: ಆಟೋ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನಪ್ಪಿರುವ ಘಟನೆ ಸಮೀಪದ ಕಡೆಮನುಗನಹಳ್ಳಿಯಲ್ಲಿ ನಡೆದಿದೆ.
ಹನಗೋಡು ಹೋಬಳಿಯ ಸಿಂಡೇನಹಳ್ಳಿ ಗ್ರಾಮದ ಬೈಕ್ ಸವಾರ ರಮೇಶ (49) ಮೃತ ದುರ್ದೈವಿ. ಈತ ತನ್ನ ಪತ್ನಿ ಹೇಮಾ ರೊಂದಿಗೆ ಕಡೆಮನುಗನಹಳ್ಳಿಯ ಚಿಕ್ಕಮ್ಮನ ಮನೆಯಲ್ಲಿ ಯುಗಾದಿ ಹಬ್ಬ ಮುಗಿಸಿಕೊಂಡು ತಮ್ಮ ಸಿಂಡೇನಹಳ್ಳಿಯ ಮನೆಗೆ ವಾಪಸಾಗುತ್ತಿದ್ದ ವೇಳೆ ಎದುರಿಗೆ ಬಂದ ಆಟೋವೊಂದು ಸ್ಕೂಟರ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಸ್ಕೂಟರ್ ಸವಾರ ರಮೇಶ್ ತೀವ್ರ ರಕ್ತಸ್ರಾವ ಗೊಂಡು ಹನಗೋಡು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯೆ ಸಾವನ್ನಪ್ಪಿದ್ದು, ಪತ್ನಿ ಹೇಮಾ ಅವರಿಗೂ ಪೆಟ್ಟಾಗಿದ್ದು ಹನಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಮರಣೋತ್ತರ ಪರೀಕ್ಷೆಯನ್ನು ಹನಗೊಡು ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಜೋಗೇಂದ್ರನಾಥ್ ನಡೆಸಿದ್ದು, ಸೋಮವಾರ ಮಧ್ಯಾಹ್ನ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.