ಚಾಮರಾಜನಗರ: ಕೊರೊನಾ ಹಿನ್ನಲೆಯಲ್ಲಿ ತಾಲೂಕಿನ ಆಲೂರು ಗ್ರಾಮದಲ್ಲಿ ಶ್ರೀ ಮಂಟೇಲಿಂಗೇಶ್ವರ ಸ್ವಾಮಿಯ ಉತ್ಸವವು ಈ ಬಾರಿ ಸರಳವಾಗಿ ನಡೆಯಿತು.ಇದೇ ವೇಳೆ ನೀಲಗಾರರ ಭಕ್ತರಿಂದ ಮಂಟೇಸ್ವಾಮಿ ಕಂಡಾಯ ಮೆರವಣೆಗೆ ನಡೆಯಿತು.
ಗ್ರಾಮದ ಆರ್ಕೇಶ್ವರ ದೇವಾಲಯದಲ್ಲಿ ದೇವರ ಐದು ಕಂಡಾಯಗಳಿಗೆ ಪೂಜೆ ಸಲ್ಲಿಸಿ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಈ ವೇಳೆ ಭಕ್ತರು ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ಬಳಿಕ ಮೆರವಣಿಗೆ ಬಸವ ಭವನಕ್ಕೆ ತಲುಪಿತು.
ಮೆರವಣಿಗೆ ತೆರಳಿದ ಸಂದರ್ಭದಲ್ಲಿ ಗ್ರಾಮದ ಪ್ರತಿಯೊಂದು ಮನೆಯಲ್ಲೂ ಭಕ್ತಿಯಿಂದ ಪೂಜಾ ಕೈಂಕರ್ಯ ನೆರವೇರಿಸಿ, ಭಕ್ತರಿಗೆ ಪ್ರಸಾದ ವಿನೋಯೋಗ ಮಾಡಲಾಯಿತು.ಈ ಸಂದರ್ಭದಲ್ಲಿ ನೀಲಗಾರರು. ವೀರಶೈವ ಸಮಾಜದ ಮುಖಂಡರು ಗ್ರಾಮಸ್ಥರು ಹಾಜರಿದ್ದರು.
ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮುನ್ನ ಕಂಡಾಯ ಉತ್ಸವವು ಅದ್ಧೂರಿಯಾಗಿ ನಡೆಯುತ್ತಿತ್ತು. ಗ್ರಾಮದ ಜನರು ಮಾತ್ರವಲ್ಲದೆ ಸುತ್ತಮುತ್ತಲಿನ ಜನ ಸೇರುವುದರೊಂದಿಗೆ ವಿವಿಧ ಸೇವೆಗಳು ನಡೆಯುತ್ತಿದ್ದವು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಸರಳವಾಗಿ ನಡೆಸುತ್ತಾ ಬರಲಾಗುತ್ತಿದೆ.
ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.
ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.