News Karnataka Kannada
Sunday, April 28 2024
ಚಾಮರಾಜನಗರ

ಎಸ್ ಡಿ ಪಿ ಐಯಿಂದ ಸರ್ಕಾರದ ಅಣಕು ಶವಯಾತ್ರೆ

Untitled 1
Photo Credit :

ಚಾಮರಾಜನಗರ: ಸೋಷಿಯಲ್ ಡೆಮಾ ಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ವತಿಯಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಚಾಮರಾಜನಗರದ ಗುಂಡ್ಲುಪೇಟೆ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಯಲ್ಲಿ ಸುಲ್ತಾನ್ ಷರೀಫ್ ಸರ್ಕಲ್, ಲಾರಿ ನಿಲ್ದಾಣ, ಡಿವಿಯೇಷನ್ ರಸ್ತೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಲ್ಲದೆ ಸರ್ಕಾರದ ಅಣಕು ಶವಯಾತ್ರೆ ಪ್ರದರ್ಶಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್‌ ಮಾತನಾಡಿ, ಭ್ರಷ್ಟ ಬಿಜೆಪಿ ಸರಕಾರದ ವಿರುದ್ಧ ಬೃಹತ್ ಜನಾಂದೋಲನ ಪ್ರಯುಕ್ತ ಜಿಲ್ಲೆಯಲ್ಲಿ ಟ್ವಿಟರ್ ಅಭಿಯಾನ, ಮಾಸ್ ಇ ಮೇಲ್ ಕ್ಯಾಂಪೇನ್ , ಆನಲೈನ್ ಪೇಟಿಷನ್, ಪೋಸ್ಟ್ ಕಾರ್ಡ್ ಚಳವಳಿ, ರಾಜ್ಯಾಧ್ಯಕ್ಷರ ಬಹಿರಂಗ ಪತ್ರ, ಸಾರ್ವಜನಿಕರಿಂದ ಸಹಿ ಸಂಗ್ರಹ ಈ ರೀತಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸರ್ಕಾರದ ಅಣಕು ಶವಯಾತ್ರೆ ಮಾಡಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸ ಬೇಕು ಎಂದು ಈ ಮೂಲಕ ರಾಷ್ಟ್ರಪತಿಗಳಲ್ಲಿ ಆಗ್ರಹ ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಸೈಯದ್ ಆರೀಫ್, ಜಿಲ್ಲಾ ಕಾರ್ಯದರ್ಶಿ ಜಬೀನೂರ್‌, ದಲಿತ ಮುಖಂಡ ಸಂಘಸೇನಾ, ಸಮಾಜವಾದಿ ಜನತಾ ಪಕ್ಷದ ಜಿ.ಎಂ.ಗಾಡ್ಕರ್‌, ಪಿಎಫ್‌ಐ ಜಿಲ್ಲಾಧ್ಯಕ್ಷ ಕಫೀಲ್, ಕಾರ್ಯದರ್ಶಿ ತೊಯೇಬ್ ಖಾನ್, ನಗರಸಭಾ ಸದಸ್ಯರಾದ ಮೊಹಮ್ಮದ್ ಅಮೀಕ್ , ಅಪ್ಷರ್‌ ಪಾಷ ಸೇರಿದಂತೆ ಇತರರು ಭಾಗವಹಿಸಿದ್ದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು