ಚಾಮರಾಜನಗರ : ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಸಮೀಪದ ರಸ್ತೆಯಲ್ಲಿ ನಡೆದಿದೆ.
ಸುಟ್ಟು ಕರಕಲಾದ ಕಾರುಮಾಂಬಳ್ಳಿ ಗ್ರಾಮದ ಪ್ರೇಮಿಗಳಾದ ಕಾಂಚನಾ (20), ಶ್ರೀನಿವಾಸ್ (23) ಎಂಬುವರು ಆತ್ಮಹತ್ಯೆಗೆ ಶರಣಾದವರು. ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದು, ಶ್ರೀನಿವಾಸ್ ಚಾಲಕ ವೃತ್ತಿ ಮಾಡುತ್ತಿದ್ದರು.ಮೃತರಿಬ್ಬರೂ ಕಳೆದ ಹಲವಾರು ವರ್ಷಗಳಿಂದಲೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಭೇಟಿ ನೀಡಿದ್ದಾರೆ.
ಕಾರಿನೊಳಗೆ ಕೂತುಕೊಂಡೇ ಬೆಂಕಿ ಹಚ್ಚಿಕೊಂಡು ಸಾವಿಗೀಡಾದ ಪ್ರೇಮಿಗಳು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.