ಚಾಮರಾಜನಗರ: ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿಂತೆ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಅರಳಿಕಟ್ಟೆ ಬೀದಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಾಯಕ ಬೀದಿಯ ಸಂಜಯ್ ಹತ್ಯೆಯಾಗಿದ್ದು, ಅಭಿ ಎಂಬಾತ ಚಾಕುವಿನಿಂದ ಇರಿದು ಹತ್ಯೆಗೈದ ಆರೋಪಿಯಾಗಿದ್ದಾನೆ.
ಸೋಮವಾರ ತಡ ರಾತ್ರಿಯ ವೇಳೆಯಲ್ಲಿ ಅಭಿ ಮತ್ತು ಸಂಜಯ್ ನಡುವೆ ಕ್ಷುಲ್ಲಕ ವಿಷಯಕ್ಕೆ ಮಾತಿನ ಚಕಮಕಿ ನಡೆದು ಕುಪಿತಗೊಂಡ ಅಭಿ ಚಾಕುವಿನಿಂದ ಸಂಜಯ್ ನನ್ನು ಚಾಕುವಿನಿಂದ ಮನಸೋ ಇಚ್ಚೆಯಂತೆ ಇರಿದು ಹತ್ಯೆ ಮಾಡಿದ್ದಾನೆ.
ಘಟನೆ ಬಗ್ಗೆ ಮಾಹಿತಿ ಪಡೆದ ಗುಂಡ್ಲುಪೇಟೆ ಪೊಲೀಸರು ಆರೋಪಿ ಅಭಿಯನ್ನು ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಡಿವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.