ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಗುಂಡ್ಲುಪೇಟೆ: ಜಮೀನಿನಲ್ಲಿ  ಬೆಳೆ ರಕ್ಷಣೆಗೆ ಹಾಕಿದ ಅಕ್ರಮ ವಿದ್ಯುತ್ ತಗುಲಿ  ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಕಗ್ಗಳದ ಹುಂಡಿ ಗ್ರಾಮದಲ್ಲಿ ನಡೆದಿದೆ.

ಕಗ್ಗಳದಹುಂಡಿ ಗ್ರಾಮದ ಶಿವಪ್ಪ (57)  ಮೃತಪಟ್ಟ ದುರ್ದೈವಿ. ಕೇರಳದ ವೈನಾಡಿನ ಅಬ್ದುಲ್ ಸುಕುರ್ ಎಂಬಾತ ಗ್ರಾಮದಲ್ಲಿ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದು ಜಮೀನಿನ ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಹಾಯಿಸಿದ್ದರು‌. ಈ ನಡುವೆ ಗ್ರಾಮದ ನಿವಾಸಿ ಶಿವಪ್ಪ ದನ ಮೇಯಿಸುತ್ತಿದ್ದು ಬಾಯಾರಿಕೆಯಾದ ಹಿನ್ನಲೆಯಲ್ಲಿ ನೀರು ತರಲು ಸುಕುರ್ ಜಮೀನಿಗೆ ತೆರಳಿದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನು, ಶಿವಪ್ಪ ಮೃತಪಟ್ಟಿರುವುದನ್ನು ಗಮನಿಸಿದ ಸುಕುರ್ ದಂಪತಿ ಶಿವಪ್ಪ ಶವವನ್ನು ಜಮೀನಿನಿಂದ 30 ಅಡಿ ದೂರದ ಬೇಲಿ ಬಳಿ ಶವ ಬಿಸಾಡಿ ತಮಗೇನು ಗೊತ್ತಿಲ್ಲದಂತೆ ತಮ್ಮ ಪಾಡಿಗಿದ್ದರು ಎಂದು ಹೇಳಲಾಗಿದೆ. ಮೃತ ಶಿವಪ್ಪ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಸುಕರ್ ದಂಪತಿ ವಿರುದ್ಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Raksha Deshpande

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

15 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

29 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

48 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

2 hours ago