ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಇದೀಗ ಕೊರೊನಾ ತಡೆಯುವಲ್ಲಿ ಕ್ರಮ ವಹಿಸಿ ಕಾರ್ಯ ನಿರ್ವಹಿಸುವ ಕೊರೊನಾ ವಾರಿಯರ್ಸ್ ಗಳನ್ನು ಸೋಂಕು ಕಾಡಲಾರಂಭಿಸಿದ್ದು ಗುಂಡ್ಲುಪೇಟೆ ಪಟ್ಟಣದ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್, ಇಬ್ಬರು ಎಎಸ್ ಐ ಮತ್ತು ಇಬ್ಬರು ಪೇದೆಗಳಿಗೆ ಸೋಂಕು ತಗುಲಿದೆ.
ಪಟ್ಟಣದ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಪೇದೆಗಳಿಗೆ ಕೊರೊನಾ ಬಂದಿರುವುದರಿಂದ ಜನ ಭಯಗೊಂಡಿದ್ದಾರೆ. ಸದ್ಯ ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಜತೆಗೆ ಕೊರೊನಾ ಸೋಂಕಿತರ ಮನೆಯವರು ಸೇರಿದಂತೆ ಪೊಲೀಸ್ ಕ್ವಾಟ್ರಸ್ ನಲ್ಲಿ ಇರುವ ಎಲ್ಲರ ಸ್ವ್ಯಾಬ್ ತೆಗೆದು ಪರೀಕ್ಷೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳ ಸಂಪರ್ಕಕ್ಕೆ ಬಂದವರಿಗೂ ಕೊರೊನಾ ತಪಾಸಣೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.