News Karnataka Kannada
Tuesday, May 07 2024
ಚಾಮರಾಜನಗರ

ಗುಂಡ್ಲುಪೇಟೆ: ಶಿವಪುರದಲ್ಲಿ ಬೋನಿಗೆ ಬಿದ್ದ ಚಿರತೆ

Cheetha
Photo Credit :

ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಡಿನಿಂದ ಹೊರಬಂದು ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಚಿರತೆಯು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಚಿರತೆಯು ಅಡ್ಡಾಡುತ್ತಾ ಸುತ್ತಮುತ್ತ ರೈತರ ಜಾನುವಾರುಗಳನ್ನು ಕೊಂದು ತಿನ್ನುವ ಮೂಲಕ  ಆತಂಕವನ್ನು ಸೃಷ್ಟಿಸಿತ್ತು. ಜಾನುವಾರುಗಳನ್ನು ಕೊಟ್ಟಿಗೆಯಿಂದ ಹೊರಕ್ಕೆ ಮೇಯಲು ಬಿಡಲು ಭಯಪಡುವಂತಾಗಿತ್ತು. ಹೀಗಾಗಿ ಗ್ರಾಮಸ್ಥರು ಬೋನಿಟ್ಟು ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು.

ರೈತರ ಮನವಿಯ ಮೇರೆಗೆ ರೈತ ಮಹೇಶ್ ಕುಮಾರ್ ಅವರ ಜಮೀನಿನಲ್ಲಿ ಬೋನನ್ನು ಇಡಲಾಗಿತ್ತು. ಇದೀಗ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಸೆರೆಯಾದ ಚಿರತೆಯನ್ನು ಬಂಡೀಪುರ ಹುಲಿಸಂರಕ್ಷಿತ ಅರಣ್ಯ ಪ್ರದೇಶದ ಅಧಿಕಾರಿಗಳು ಅರಣ್ಯಕ್ಕೆ ಬಿಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು