ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಡಿನಿಂದ ಹೊರಬಂದು ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಚಿರತೆಯು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಚಿರತೆಯು ಅಡ್ಡಾಡುತ್ತಾ ಸುತ್ತಮುತ್ತ ರೈತರ ಜಾನುವಾರುಗಳನ್ನು ಕೊಂದು ತಿನ್ನುವ ಮೂಲಕ ಆತಂಕವನ್ನು ಸೃಷ್ಟಿಸಿತ್ತು. ಜಾನುವಾರುಗಳನ್ನು ಕೊಟ್ಟಿಗೆಯಿಂದ ಹೊರಕ್ಕೆ ಮೇಯಲು ಬಿಡಲು ಭಯಪಡುವಂತಾಗಿತ್ತು. ಹೀಗಾಗಿ ಗ್ರಾಮಸ್ಥರು ಬೋನಿಟ್ಟು ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು.
ರೈತರ ಮನವಿಯ ಮೇರೆಗೆ ರೈತ ಮಹೇಶ್ ಕುಮಾರ್ ಅವರ ಜಮೀನಿನಲ್ಲಿ ಬೋನನ್ನು ಇಡಲಾಗಿತ್ತು. ಇದೀಗ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಸೆರೆಯಾದ ಚಿರತೆಯನ್ನು ಬಂಡೀಪುರ ಹುಲಿಸಂರಕ್ಷಿತ ಅರಣ್ಯ ಪ್ರದೇಶದ ಅಧಿಕಾರಿಗಳು ಅರಣ್ಯಕ್ಕೆ ಬಿಟ್ಟಿದ್ದಾರೆ.