ಚಾಮರಾಜನಗರ : ಶನಿವಾರ ರಾತ್ರಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ನಲ್ಲಿ ನಡೆದ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹನೂರು ತಾಲ್ಲೂಕು ಆಹಾರ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಚಂದ್ರುನಾಯ್ಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ
ಚಾಮರಾಜನಗರ ಹನೂರು ತಾಲ್ಲೂಕು ಆಹಾರ ನೀರಿಕ್ಷರಾದ ಚಂದ್ರುನಾಯ್ಕ್ ರವರು ಹಲವು ವರ್ಷಗಳ ಕಾಲ ಹನೂರು ಶೈಕ್ಷಣಿಕ ವಲಯದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಂತರ ಆಹಾರ ಇಲಾಖೆಗೆ ಆಯ್ಕೆ ಆಗಿ ಹನೂರು ತಾಲ್ಲೂಕು ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು
ಶನಿವಾರದಂದು ತಾಲ್ಲೂಕಿನ ಗೋಪಿನಾಥಂ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಘೊಂಡಿದ್ದರು. ಕರ್ತವ್ಯ ಮುಗಿಸಿ ಮನೆ ಹಿಂತಿರುಗಿದ್ದ ಇವರಿಗೆ ದುರದೃಷ್ಟವಶಾತ್ ಶನಿವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದೆ ಬಳಿಕ ಕುಟುಂಬಸ್ಥರು ಕೂಡಲೇ ಸಮೀಪದ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ರವಾನೆ ಮಾಡಿದಾದ್ದರೂ ಯಾವುದೇ ಪ್ರಯೋಜನವಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.