ಚಾಮರಾಜನಗರದಲ್ಲಿ ಕಲಬೆರಕೆ ಡೀಸೆಲ್ ಪತ್ತೆ

ಚಾಮರಾಜನಗರ: ತಮಿಳುನಾಡಿನಿಂದ ಕಲಬೆರೆಕೆ ಡೀಸಲ್ ನ್ನು ತಂದು ತಾಲಕೂನ ಕರಿಕಲ್ಲು ಗಣಿಗಾರಿಕೆಗೆ ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಹಚ್ಚಿದ್ದು, ಈ ಸಂಬಂಧ ಟ್ಯಾಂಕರ್ ಹಾಗೂ ಕಲಬೆರಕೆ ಡೀಸಲ್ ನ್ನು ವಶಪಡಿಸಿಕೊಳ್ಳಲಾಗಿದೆ.

ತಮಿಳುನಾಡಿನ ನಾಮಕಲ್ ನ ಆರ್.ಎಂ. ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಕಲಬೆರಕೆ ಡೀಸೆಲ್ ತುಂಬಿದ ಟ್ಯಾಂಕರ್ ನ್ನು ಚಾಮರಾಜನಗರ ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಬಳಿಯ ಶ್ರೀ ಕೃಷ್ಣ ಗ್ರಾನೈಟ್ ನಲ್ಲಿ ಇಳಿಸುವಾಗ ಆಹಾರ ಇಲಾಖೆಯ ಉಪ ನಿರ್ದೇಶಕ ಯೋಗಾನಂದ್ ನೇತೃತ್ವದಲ್ಲಿ ದಾಳಿ ನಡೆಸಿ ಜಪ್ತಿ ಮಾಡಲಾಯಿತು.

ಕೆಲವು ಮೂಲಗಳ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ತಮಿಳುನಾಡಿನ ನಾಮಕಲ್ ನ ಆರ್.ಎಂ ಪೆಟ್ರೋಲಿಯಂ ಸಂಸ್ಥೆಯ 170 ಟ್ಯಾಂಕರ್ ಗಳಲ್ಲಿ ಕಲಬೆರಕೆ ಡೀಸೆಲ್ ಸರಭರಾಜು ಮತ್ತು ಮಾರಾಟ ಮಾಡುತ್ತಿದ್ದು, ಪ್ರತಿ ಲೀಟರ್ ಗೆ 51 ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಕಡಿಮೆ ಬೆಲೆಯಲ್ಲಿ ಡೀಸೆಲ್ ಮಾರಾಟ ಮಾಡುವುದರ ಬಗ್ಗೆ ಖಚಿತ ಮಾಹಿತಿ ಆಧರಿಸಿದ ಆಹಾರ ಇಲಾಖೆಯ ಅಧಿಕಾರಿಗಳು 5 ಸಾವಿರ ಲೀಟರ್ ಡೀಸೆಲ್ ಇರುವ ಟ್ಯಾಂಕರ್ ನ್ನು ಮತ್ತು ಚಾಲಕನನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

Sneha Gowda

Recent Posts

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

5 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

19 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

26 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

30 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

41 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

45 mins ago