News Karnataka Kannada
Saturday, May 04 2024
ಚಾಮರಾಜನಗರ

ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Dead
Photo Credit : News Kannada

ಚಾಮರಾಜನಗರ : ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಚಾಮರಾಜನಗರ ತಾಲ್ಲೂಕಿನ ದೊಡ್ಡಮೂಡಹಳ್ಳಿ ಸಮೀಪ ನಡೆದಿದೆ.

ಮೂಲತಃ ತಮಿಳುನಾಡಿನ ಸತ್ಯ ಮಂಗಲಂ ನಿವಾಸಿ ಸುರೇಶ್ (45)ಸಾವನ್ನಪ್ಪಿದ ದುರ್ದೈವಿ. ಇವರು ವೃತ್ತಿಯಲ್ಲಿ ಕ್ಷೌರಿಕರಾಗಿದ್ದು ಶುಕ್ರವಾರ ರಾತ್ರಿ ಚಿಕ್ಕಮೂಡಹಳ್ಳಿ ಯಿಂದ ಪಡಿತರ ತರುವಾಗ ದಾರಿ ಮಧ್ಯೆ ಎದುರಾದ ಕಾಡಾನೆ ದಿಢೀರ್ ದಾಳಿ ನಡೆಸಿದೆ ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೃತ ಸುರೇಶ್ ಕಳೆದ 15 ವರ್ಷಗಳಿಂದ ತಮಿಳುನಾಡಿನ ಸತ್ಯಮಂಗಲಂ ಕಡೆಯಿಂದ ಆಗಮಿಸಿ ಸಂಬಂಧಿಕರ ಮನೆಯಲ್ಲೇ ಉಳಿದುಕೊಂಡು ಬೂದಿಪಡಗ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳಿಗೆ ಕ್ಷೌರ ಮಾಡುತ್ತಿದ್ದರು ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬಿ.ಆರ್. ಟಿ ಹುಲಿ ಸಂಕರಕ್ಷಿತ ಪ್ರದೇಶದ ಸಿಬ್ಬಂದಿ ಹಾಗೂ ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು